alex Certify ಪ್ರತಿಭಟನೆಯ ಎಚ್ಚರಿಕೆ ನೀಡಿದ ಟಾಲಿವುಡ್ ಪವರ್ ಸ್ಟಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿಭಟನೆಯ ಎಚ್ಚರಿಕೆ ನೀಡಿದ ಟಾಲಿವುಡ್ ಪವರ್ ಸ್ಟಾರ್

ವಿಜಯವಾಡ: ಚಂಡಮಾರುತದಿಂದ ತತ್ತರಿಸಿರುವ ರೈತರಿಗೆ ಪರಿಹಾರ ಒದಗಿಸಿಕೊಡದಿದ್ದಲ್ಲಿ ಪ್ರತಿಭಟನೆಗೆ ಮುಂದಾಗುವುದಾಗಿ ಸರ್ಕಾರಕ್ಕೆ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಎಚ್ಚರಿಕೆ ನೀಡಿದ್ದಾರೆ.

ಜನಸೇನಾ ಪಕ್ಷದ ಅಧ್ಯಕ್ಷರೂ ಆಗಿರುವ ಪವನ್ ಕಲ್ಯಾಣ್, ಚುನಾವಣೆಯಲ್ಲಿ ಸೋಲನುಭವಿಸಿದ ಮಾತ್ರಕ್ಕೆ ಭಯದಿಂದ ಓಡಿಹೋಗಲ್ಲ, ಮಹತ್ವಾಕಾಂಕ್ಷೆಯ ವ್ಯಕ್ತಿಗೆ ಸೋಲೆಂಬುದಿಲ್ಲ. ರಾಜ್ಯದಲ್ಲಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ನಿವಾರ್ ಚಂಡಮಾರುತದಿಂದ ಬೆಳೆ ನಷ್ಟವಾದ ರೈತರಿಗೆ ಪ್ರತಿ ಎಕರೆಗೆ 35 ಸಾವಿರ ರೂಪಾಯಿ ಪರಿಹಾರ ನೀಡಬೇಕು. ಮುಂದಿನ ಬಜೆಟ್ ಅಧಿವೇಶನದೊಳಗಾಗಿ ಸರ್ಕಾರ ರೈತರಿಗೆ ಪರಿಹಾರ ನೀಡದಿದ್ದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ, ಅಸೆಂಬ್ಲಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದಾರೆ.

ಚಂಡಮಾರುತದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ಪರಿಹಾರ ಕೋರಿ ಕೃಷ್ಣಾ ಜಿಲ್ಲಾಧಿಕಾರಿಗೆ ನಟ ಪವನ್ ಕಲ್ಯಾಣ್ ಮನವಿ ಪತ್ರ ಸಲ್ಲಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...