alex Certify ಪ್ರಾಣ ರಕ್ಷಣೆಗಾಗಿ ‘ಮೃತ್ಯುಂಜಯ ಹೋಮ’ದ ಮೊರೆ ಹೋದ ನಟಿ ಕಂಗನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಾಣ ರಕ್ಷಣೆಗಾಗಿ ‘ಮೃತ್ಯುಂಜಯ ಹೋಮ’ದ ಮೊರೆ ಹೋದ ನಟಿ ಕಂಗನಾ

ಬಾಲಿವುಡ್ ಚಿತ್ರರಂಗದ ಖ್ಯಾತ ನಟಿ ಕಂಗನಾ ನಟನೆ ಮಾತ್ರವಲ್ಲದೆ ತಮ್ಮ ವಿವಾದಾತ್ಮಕ ಹೇಳಿಕೆಗಳ ಮೂಲಕವೂ ಸದಾ ಸುದ್ದಿಯಲ್ಲಿರುತ್ತಾರೆ. ಈ ಹೇಳಿಕೆಗಳಿಂದಾಗಿಯೇ ಅವರಿಗೆ ಬಾಲಿವುಡ್ ಚಿತ್ರರಂಗದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಶತ್ರುಗಳು ಸೃಷ್ಟಿಯಾಗಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ಬಳಿಕ ಕಂಗನಾ ರಣಾವತ್, ಬಾಲಿವುಡ್ ಚಿತ್ರರಂಗದ ಖ್ಯಾತನಾಮರ ವಿರುದ್ಧ ನಿರಂತರವಾಗಿ ಆರೋಪಗಳನ್ನು ಮಾಡುತ್ತಿದ್ದು, ಅವರ ಶತ್ರುಗಳ ಸಂಖ್ಯೆಯಲ್ಲಿ ಹೆಚ್ಚಳವಾಗುವಂತೆ ಮಾಡಿದೆ. ಹೀಗಾಗಿಯೇ ಕಂಗನಾ ತಮಗೆ ಜೀವ ಬೆದರಿಕೆ ಇರುವುದಾಗಿ ಹೇಳಿಕೊಂಡಿದ್ದರು.

ಇದಕ್ಕೆ ಪುಷ್ಟಿ ನೀಡುವಂತೆ ಕೆಲದಿನಗಳ ಹಿಂದೆ ಕಂಗನಾ ರಣಾವತ್ ಮನೆ ಬಳಿ ಅಪರಿಚಿತರು ಗುಂಡು ಹಾರಿಸಿದ್ದಾರೆಂಬ ಸಂಗತಿ ದೊಡ್ಡ ಸುದ್ದಿಯಾಗಿತ್ತು. ಈ ಘಟನೆ ಬಳಿಕ ಕಂಗನಾ ಅವರಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಇದರ ಜೊತೆಗೆ ಪ್ರಾಣ ರಕ್ಷಣೆಗಾಗಿ ಕಂಗನಾ ಮೃತ್ಯುಂಜಯ ಹೋಮದ ಮೊರೆ ಹೋಗಿದ್ದು, ತಮ್ಮ ತಾಯಿಯ ನಿವಾಸದಲ್ಲಿ ನಡೆದ ಹೋಮದಲ್ಲಿ ಪಾಲ್ಗೊಂಡಿದ್ದ ಕಂಗನಾ ಮಂತ್ರ ಪಠಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...