alex Certify ಮತ್ತೊಂದು ವಿವಾದದಲ್ಲಿ ರ್ಯಾಪರ್ ಚಂದನ್ ಶೆಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ವಿವಾದದಲ್ಲಿ ರ್ಯಾಪರ್ ಚಂದನ್ ಶೆಟ್ಟಿ

‘ಬಿಗ್ ಬಾಸ್’ ವಿನ್ನರ್, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಮಲೈ ಮಹಾದೇಶ್ವರ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮಾದಪ್ಪನ ಭಕ್ತಿ ಗೀತೆಯನ್ನು ಅಶ್ಲೀಲವಾಗಿ ತೋರಿಸಿದ್ದಾರೆ ಎಂಬ ಆರೋಪ ಚಂದನ್ ಮೇಲೆ ಬಂದಿದೆ.

ಹೌದು. ಚಂದನ್ ಶೆಟ್ಟಿ, ಗಣೇಶ ಚತುರ್ಥಿಯಂದು ಕೋಲುಮಂಡೆ ಜಂಗಮ ದೇವ ಎಂಬ ಹೊಸ ರ್ಯಾಂಪ್ ಸಾಂಗ್ ಬಿಡುಗಡೆ ಮಾಡಿದ್ದು, ಇದು ವಿವಾದಕ್ಕೆ ಕಾರಣವಾಗಿದೆ. ಈ ಹಾಡಿನಲ್ಲಿ ಶಿವಶರಣೆ ಸಂಕಮ್ಮನನ್ನು ಕೆಟ್ಟದಾಗಿ ತೋರಿಸಲಾಗಿದೆ ಮಾತ್ರವಲ್ಲ ಭಕ್ತಿಗೀತೆಯನ್ನು ತಿರುಚಲಾಗಿದೆ. ಈ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಲಾಗಿದೆ ಎಂದು ಮಾದಪ್ಪ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಚಾಮರಾಜನಗರ ಜಿಲ್ಲೆಯ ಹಲವು ಯುವಕರು ಚಂದನ್ ಶೆಟ್ಟಿ ವಿರುದ್ಧ ಕಿಡಿಕಾರಿದ್ದಾರೆ. ಈಗಾಗಲೇ ಈ ಹಾಡು ಯೂಟೂಬ್ ನಲ್ಲಿ ಭಾರೀ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...