alex Certify ಮರೆಯಲಾಗದ ಸಿನಿಮಾ ನೀಡಿದ್ದ ನಿರ್ದೇಶಕನ ಅಗಲಿಕೆಗೆ ಪವರ್ ಸ್ಟಾರ್ ಕಂಬನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮರೆಯಲಾಗದ ಸಿನಿಮಾ ನೀಡಿದ್ದ ನಿರ್ದೇಶಕನ ಅಗಲಿಕೆಗೆ ಪವರ್ ಸ್ಟಾರ್ ಕಂಬನಿ

ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ವಿಧಿವಶರಾಗಿರುವ ಖ್ಯಾತ ನಿರ್ದೇಶಕ ವಿಜಯ್ ರೆಡ್ಡಿ ಅಗಲಿಕೆಗೆ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಂಬನಿ ಮಿಡಿದಿದ್ದಾರೆ.

ತಂದೆಯವರ ಮರೆಯಲಾಗದ ಸಿನಿಮಾಗಳಾದ ಗಂಧದಗುಡಿ, ಮಯೂರ, ನಾ ನಿನ್ನ ಮರೆಯಲಾರೆ, ಭಕ್ತ ಪ್ರಹ್ಲಾದ ಸೇರಿದಂತೆ ಹಲವು ಸಿನೆಮಾಗಳನ್ನು ನಿರ್ದೇಶಿಸಿರುವ ವಿಜಯ್ ರೆಡ್ಡಿ ಅವರು ನಿಧನರಾಗಿರುವುದು ದುಃಖ ತಂದಿದೆ. ಅವರ ನಿರ್ದೇಶನದ ಭಕ್ತ ಪ್ರಹ್ಲಾದ ಚಿತ್ರದಲ್ಲಿ ನಾನು ನಟಿಸಿರುವುದೆ ನನ್ನ ಭಾಗ್ಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.

ವಿಜಯ್ ರೆಡ್ಡಿ, ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ವಿಧಿವಶರಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...