alex Certify ಮೂವರ ಸಿಸಿಬಿ ವಿಚಾರಣೆ ಅಂತ್ಯ: ವಿಚಾರಣೆ ವೇಳೆ ನಿರೂಪಕ ಅಕುಲ್ ಬಾಲಾಜಿ ಹೇಳಿದ್ದೇನು….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂವರ ಸಿಸಿಬಿ ವಿಚಾರಣೆ ಅಂತ್ಯ: ವಿಚಾರಣೆ ವೇಳೆ ನಿರೂಪಕ ಅಕುಲ್ ಬಾಲಾಜಿ ಹೇಳಿದ್ದೇನು….?

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಆರ್ಯನ್ ಹಾಗೂ ಆರ್.ವಿ ಯುವರಾಜ್ ಅವರ ಸಿಸಿಬಿ ವಿಚಾರಣೆ ಅಂತ್ಯವಾಗಿದ್ದು, ಮೂವರು ಸಿಸಿಬಿ ಕಚೇರಿಯಿಂದ ಹೊರ ಬಂದಿದ್ದಾರೆ.

ಸಿಸಿಬಿ ನೋಟೀಸ್ ಹಿನ್ನಲೆಯಲ್ಲಿ ಮೂವರು ಇಂದು ಚಾಮರಾಜಪೇಟೆ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ಸತತ 5 ಗಂಟೆಗಳ ಕಾಲ ವಿಚಾರಣೆ ನಡೆಸಿರುವ ಅಧಿಕಾರಿಗಳು ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿದ್ದಾರೆ.

ಸಿಸಿಬಿ ವಿಚಾರಣೆ ವೇಳೆ ನಿರೂಪಕ ಅಕುಲ್ ಬಾಲಾಜಿ, ನನಗೂ ಡ್ರಗ್ಸ್ ದಂಧೆಗೂ ಯಾವುದೇ ಸಂಬಂಧವಿಲ್ಲ. ಪ್ರತೀಕ್ ಶೆಟ್ಟಿ, ವೈಭವ್ ಜೈನ್ ಪರಿಚಯವಿದೆ. ಕೆಲ ಪಾರ್ಟಿಗಳಲ್ಲಿ ಅವರ ಪರಿಚಯವಾಗಿತ್ತು ಅವರು ನನ್ನ ಸ್ನೇಹಿತರಷ್ಟೇ. ಆದರೆ ಅವರು ನಡೆಸುತ್ತಿದ್ದ ಡ್ರಗ್ಸ್ ವ್ಯವಹಾರದ ಬಗ್ಗೆ ನನಗೆ ಏನೂ ಗೊತ್ತಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...