alex Certify ವಾದ್ಯಗೋಷ್ಠಿ ಕಲಾವಿದರ ಪ್ರತಿಭಟನೆಗೆ ಕಿಚ್ಚ ಸುದೀಪ್ ಬೆಂಬಲ: ಅಭಿಮಾನಿಗಳಿಗೆ, ಸರ್ಕಾರಕ್ಕೆ ಅಭಿನಯಚಕ್ರವರ್ತಿ ಮಾಡಿದ ಮನವಿಯೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾದ್ಯಗೋಷ್ಠಿ ಕಲಾವಿದರ ಪ್ರತಿಭಟನೆಗೆ ಕಿಚ್ಚ ಸುದೀಪ್ ಬೆಂಬಲ: ಅಭಿಮಾನಿಗಳಿಗೆ, ಸರ್ಕಾರಕ್ಕೆ ಅಭಿನಯಚಕ್ರವರ್ತಿ ಮಾಡಿದ ಮನವಿಯೇನು…?

ಕಿಚ್ಚ ಸುದೀಪ್ ಈ ಸಿನಿಮಾದಲ್ಲಿ ಬೇಕೇ ಬೇಕು ಎಂದು ಹಠ ಹಿಡಿದಿದ್ದಾರೆ ನಿರ್ದೇಶಕ! – Public TV

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ಆರ್ಕೆಸ್ಟ್ರಾ ನಿಷೇಧಿಸಿರುವ ಹಿನ್ನೆಲೆಯಲ್ಲಿ ಆರ್ಕೆಸ್ಟ್ರಾ ಕಲಾವಿದರು ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆಗೆ ನಟ ಕಿಚ್ಚ ಸುದೀಪ್ ಬೆಂಬಲ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುದೀಪ್, ನಾನು ವಾದ್ಯಗೋಷ್ಠಿ ಕಲಾವಿದರ ಜೊತೆಗಿದ್ದೇನೆ. ಅವರ ಹೋರಾಟಕ್ಕೆ ನನ್ನ ಬೆಂಬಲವಿದೆ. ನನ್ನ ಅಭಿಮಾನಿಗಳು, ಸ್ನೇಹಿತರಿಗೆ ಸಾಧ್ಯವಾದಷ್ಟು ನೆರವು ನೀಡುವಂತೆ ಕೋರುತ್ತೇನೆ ಎಂದಿದ್ದಾರೆ.

ಅಲ್ಲದೇ ಆರ್ಕೆಸ್ಟ್ರಾ ಕಲಾವಿದರ ಪರವಾಗಿ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳಬೇಕು. ದೂರದರ್ಶನವಿಲ್ಲದ ಕಾಲದಿಂದಲೂ ನಮ್ಮನ್ನು ರಂಜಿಸುತ್ತಿರುವ ಈ ಕಲಾ ಬಳಗವನ್ನು ಮುಂದಿನ ತಲೆಮಾರುಗಳ ತನಕ ಕಾಪಾಡಿಕೊಳ್ಳಬೇಕಾದುದು ನಮ್ಮೆಲ್ಲರ ಕರ್ತವ್ಯ. ನಮ್ಮ ಈ ಪ್ರತಿಭೆಗಳ ಪರವಾಗಿ ನಾವೇ ನಿಲ್ಲದಿದ್ದರೆ ಬೇರಾರು ನಿಲ್ಲುತ್ತಾರೆ…? ಎಂದು ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...