alex Certify ವಿವಾದಕ್ಕೆ ಕಾರಣವಾಗಿದೆ ಸುಶಾಂತ್ ಸಿಂಗ್ ಪ್ರಕರಣ ಕುರಿತ ಬಿಹಾರ ಸರ್ಕಾರದ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಾದಕ್ಕೆ ಕಾರಣವಾಗಿದೆ ಸುಶಾಂತ್ ಸಿಂಗ್ ಪ್ರಕರಣ ಕುರಿತ ಬಿಹಾರ ಸರ್ಕಾರದ ನಿರ್ಧಾರ

ಖ್ಯಾತ ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಸುಶಾಂತ್ ಜೊತೆ ಇದ್ದ ನಟಿ ರಿಯಾ ಚಕ್ರವರ್ತಿ ಸುಮಾರು 15 ಕೋಟಿ ರೂಪಾಯಿಗಳನ್ನು ತಮ್ಮ ಖಾತೆಗೆ ಅಕ್ರಮವಾಗಿ ವರ್ಗಾಯಿಸಿ ಕೊಂಡಿದ್ದಾರೆಂದು ಸುಶಾಂತ್ ಪೋಷಕರು ಮತ್ತೊಂದು ಗುರುತರ ಆರೋಪ ಮಾಡಿದ್ದಾರೆ.

ಸುಶಾಂತ್ ಸಿಂಗ್ ಆತ್ಮಹತ್ಯೆ ಕುರಿತಂತೆ ಈಗಾಗಲೇ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದು, ಬಳಿಕ ಸುಶಾಂತ್ ಪೋಷಕರು ಬಿಹಾರದ ಪಾಟ್ನಾದಲ್ಲಿ ಮತ್ತೊಂದು ದೂರು ದಾಖಲಿಸಿದ ಕಾರಣ ಪಾಟ್ನಾ ಪೊಲೀಸರು ಸಹ ತನಿಖೆ ನಡೆಸಲು ಮುಂದಾಗಿದ್ದಾರೆ. ಆದರೆ ಯಾವುದೇ ಒಂದು ದೂರು ಬೇರೆ ಕಡೆ ದಾಖಲಾದ ಸಂದರ್ಭದಲ್ಲಿ ಪ್ರಕರಣ ನಡೆದ ವ್ಯಾಪ್ತಿಯಲ್ಲಿನ ಪೊಲೀಸ್ ಠಾಣೆಗೆ ವರ್ಗಾಯಿಸಬೇಕಿದ್ದು, ಆದರೆ ಪಾಟ್ನಾ ಪೊಲೀಸರು ಸ್ವತಂತ್ರ ತನಿಖೆಗೆ ಮುಂದಾಗಿರುವುದು ಜಟಾಪಟಿಗೆ ಕಾರಣವಾಗಿದೆ.

ಇದರ ಜೊತೆಗೆ ಈಗ ಬಿಹಾರ ಸರ್ಕಾರ, ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದು ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಈಗಾಗಲೇ ಪೊಲೀಸ್ ತನಿಖೆ ನಡೆಯುತ್ತಿರುವಾಗ ಮತ್ತೊಂದು ತನಿಖಾ ಸಂಸ್ಥೆಗೆ ವಹಿಸಲು ಮುಂದಾಗಿರುವುದು ಸೂಕ್ತವಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಈ ವರ್ಷದ ಅಂತ್ಯದಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಹೀಗಾಗಿ ರಾಜಕೀಯ ಲಾಭ ಪಡೆಯಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂತಹ ಒಂದು ನಿರ್ಧಾರ ಕೈಗೊಂಡಿದ್ದಾರೆ ಎಂಬ ಆರೋಪ ಕೂಡ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...