alex Certify ಸಿನಿ ಲೋಕದತ್ತ ಮುಖ ಮಾಡುವವರಿಗೆ ಜಗ್ಗೇಶ್ ನೀಡಿದ ಸಲಹೆಯೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿನಿ ಲೋಕದತ್ತ ಮುಖ ಮಾಡುವವರಿಗೆ ಜಗ್ಗೇಶ್ ನೀಡಿದ ಸಲಹೆಯೇನು…?

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯುವ ಜನತೆ ಸಿನಿಮಾರಂಗದತ್ತ ಒಲವು ತೋರುತ್ತಿದ್ದಾರೆ. ಹೊಸ ಹೊಸ ನಿರ್ದೇಶಕರು, ನಿರ್ಮಾಪಕರು ಸಿನಿಮಾ ಮಾಡಲು ಹೋಗಿ ಜೀವನವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ. ಇಂತಹ ತಪ್ಪು ನಿರ್ಧಾರಗಳನ್ನು ಮಾಡಬೇಡಿ ಎಂದು ನವರಸನಾಯಕ ಜಗ್ಗೇಶ್ ಸಲಹೆ ನೀಡಿದ್ದಾರೆ.

ಸಿನಿಮಾ ನಂಬಿ ತಂದೆ-ತಾಯಿ ಕನಸು ಹಾಗೂ ನಿಮ್ಮ ಸುಂದರ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ. ಇಂದಿನ ಬಣ್ಣದ ಲೋಕದಲ್ಲಿ ನೆಲೆ ಕಂಡುಕೊಳ್ಳುವುದು ಕಷ್ಟಸಾಧ್ಯ ಎಂದು ಜಗ್ಗೇಶ್ ಹೇಳಿದ್ದಾರೆ.

ಅಭಿಮಾನಿಯೋರ್ವ ಜಗ್ಗೇಶ್ ಅವರಿಗೆ ಟ್ವೀಟ್ ಮೂಲಕ ಸಲಹೆ ಕೇಳಿದ್ದಾನೆ. ತಾನು ನಿರ್ದೇಶಕನಾಗಬೇಕು ಎಂಬ ಕನಸು ಹೊತ್ತಿದ್ದು, ಇಂಜಿನಿಯರಿಂಗ್ ಓದಲೇ, ಇಲ್ಲ ಸಿನಿಮಾ ಉದ್ಯಮಕ್ಕೆ ಬರಲೇ ಎಂದು ಪ್ರಶ್ನಿಸಿದ್ದಾನೆ. ಅಭಿಮಾನಿಯ ಪ್ರಶ್ನೆಗೆ ಉತ್ತರಿಸಿರುವ ಜಗ್ಗೇಶ್, ದಯಮಾಡಿ ಓದಿ ದಡ ಸೇರಿ. ಇಂದಿನ ಸಿನಿಮಾ ನಂಬಿ ತಂದೆ-ತಾಯಿ ಕನಸು, ನಿಮ್ಮ ಜೀವನ ಹಾಳು ಮಾಡಿಕೊಳ್ಳದಿರಿ. ನೀವೆಲ್ಲಾ ಅಂದುಕೊಂಡಷ್ಟು ಸುಲಭವಿಲ್ಲಾ ಇಂದಿನ ಸಿನಿಮಾ. ಬೇಕಾದರೆ ಸಂತೋಷಕ್ಕೆ ಹವ್ಯಾಸವಾಗಿ ಬಳಸಿ ವೃತ್ತಿಯಾಗಿ ಅಲ್ಲ! ಬೆರಳೆಣಿಸುವ ಕೆಲವರ ಬಿಟ್ಟು 98% ಸಿನಿಮಾ ಜನ ಸಂಕಷ್ಟದಲ್ಲಿ ಇದ್ದಾರೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...