alex Certify ಸಿಸಿಬಿ ವಿಚಾರಣೆಗೆ ಸದ್ಯಕ್ಕೆ ಹಾಜರಾಗಲು ಸಾಧ್ಯವಿಲ್ಲವೆಂದ ಪ್ರಿಯಾಂಕಾ…! ಕಾರಣವೇನು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಸಿಬಿ ವಿಚಾರಣೆಗೆ ಸದ್ಯಕ್ಕೆ ಹಾಜರಾಗಲು ಸಾಧ್ಯವಿಲ್ಲವೆಂದ ಪ್ರಿಯಾಂಕಾ…! ಕಾರಣವೇನು ಗೊತ್ತಾ…?

ಮುಂಬೈ: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆಗೆ ಹಾಜರಾಗಲು ಸ್ವಲ್ಪ ಸಮಯಾವಕಾಶ ನೀಡುವಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ಮನವಿ ಮಾಡಿಕೊಂಡಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಪ್ರಿಯಾಂಕಾ ಸಹೋದರ ಆದಿತ್ಯ ಆಳ್ವಾ ಹೆಸರು ಕೇಳಿಬಂದಿದ್ದು, ಆದಿತ್ಯನಿಗಾಗಿ ಈಗಾಗಲೇ ಸಿಸಿಬಿ ಹುಡುಕಾಟ ನಡೆಸಿದೆ. ಆದರೆ ಆದಿತ್ಯನ ಪತ್ತೆಯಾಗಿಲ್ಲ. ಆದಿತ್ಯ ಆಳ್ವಾಗೆ ಪ್ರಿಯಾಂಕಾ ಹಾಗೂ ಆಕೆ ಪತಿ ವಿವೇಕ್ ಒಬೆರಾಯ್ ಸಹಾಯ ಮಾಡಿರುವ ಶಂಕೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಪ್ರಿಯಾಂಕಾಗೆ ವಿಚಾರಣೆ ಹಾಜರಾಗುವಂತೆ 2 ಬಾರಿ ನೋಟಿಸ್ ನೀಡಿದ್ದಾರೆ. 2 ಬಾರಿಯೂ ವಿಚಾರಣೆಯಿಂದ ತಪ್ಪಿಸಿಕೊಂಡಿರುವ ಪ್ರಿಯಾಂಕಾ, ವಿಚಾರಣೆಗೆ ಹಾಜರಾಗಲು ಇನ್ನಷ್ಟು ದಿನಗಳ ಕಾಲ ಸಮಯಾವಕಾಶ ನೀಡುವಂತೆ ಸಿಸಿಬಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಸಿಸಿಬಿಗೆ ಇ-ಮೇಲ್ ಮಾಡಿರುವ ಪ್ರಿಯಾಂಕಾ, ನನಗೆ ಇಬ್ಬರು ಚಿಕ್ಕ ಮಕ್ಕಳಿದ್ದಾರೆ. ಹಾಗಾಗಿ ಸಧ್ಯಕ್ಕೆ ನಾನೊಬ್ಬಳೇ ಬೆಂಗಳೂರಿಗೆ ಬರಲು ಸಾಧ್ಯವಿಲ್ಲ. ಅಲ್ಲದೇ ಬೆಂಗಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚಿರುವುದರಿಂದ ಸದ್ಯ ಮಕ್ಕಳನ್ನು ಬೆಂಗಳೂರಿಗೆ ಕರೆತರಲು ಸಾಧ್ಯವಿಲ್ಲ. ಹಾಗಾಗಿ ವಿಚಾರಣೆಗೆ ಹಾಜರಾಗಲು ಇನ್ನೂ ಕೆಲದಿನಗಳ ಸಮಯಾವಕಾಶ ನೀಡಬೇಕು. ಕೆಲದಿನಗಳಲ್ಲೇ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...