alex Certify BIG NEWS: ಟಾಲಿವುಡ್ ಹೊಸ ನೀತಿ ವಿರುದ್ಧ ಸಿಡಿದೆದ್ದ ರಾಬರ್ಟ್ – ಕನ್ನಡ ಸಿನಿಮಾಗಳಿಗೆ ಅಲ್ಲಿ ಸಮಸ್ಯೆ ಮಾಡುತ್ತಿರುವುದೇಕೆ ಎಂದ ದರ್ಶನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟಾಲಿವುಡ್ ಹೊಸ ನೀತಿ ವಿರುದ್ಧ ಸಿಡಿದೆದ್ದ ರಾಬರ್ಟ್ – ಕನ್ನಡ ಸಿನಿಮಾಗಳಿಗೆ ಅಲ್ಲಿ ಸಮಸ್ಯೆ ಮಾಡುತ್ತಿರುವುದೇಕೆ ಎಂದ ದರ್ಶನ್

ಬೆಂಗಳೂರು: ಟಾಲಿವುಡ್ ಚಿತ್ರರಂಗದ ಹೊಸ ನೀತಿ ವಿರುದ್ಧ ಕಿಡಿಕಾರಿರುವ ಚಾಲೇಂಜಿಂಗ್ ಸ್ಟಾರ್ ದರ್ಶನ್ ಈ ಬಗ್ಗೆ ಫಿಲ್ಮ್ ಚೇಂಬರ್ ಗೆ ದೂರು ನೀಡಿದ್ದಾರೆ. ಕರ್ನಾಟಕದಲ್ಲಿ ಯಾವಾಗ ಬೇಕಾದರೂ ತೆಲುಗು ಚಿತ್ರಗಳನ್ನು ಬಿಡುಗಡೆ ಮಾಡಲು ಅವಕಾಶ ನೀಡಲಾಗುತ್ತಿದೆ. ಆದರೆ ತೆಲುಗಿನಲ್ಲಿ ಕನ್ನಡ ಚಿತ್ರಗಳ ಬಿಡುಗಡೆಗೆ ಅಡ್ಡಿಯುಂಟು ಮಾಡಲಾಗುತ್ತಿದೆ. ಈ ಧೋರಣೆ ಸರಿಯಲ್ಲ ಎಂದು ನಟ ದರ್ಶನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

BIG NEWS: ತೆಲುಗು ಚಿತ್ರರಂಗದ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗರಂ

ಈ ಕುರಿತು ಫಿಲ್ಮ್ ಚೇಂಬರ್ ಗೆ ದೂರು ನೀಡಿರುವ ದರ್ಶನ್, ಸುದ್ದಿಗಾರರೊಂದಿಗೆ ಮಾತನಾಡಿ, ಪರಭಾಷೆಯವರು ನಮ್ಮಲ್ಲಿ ಸಿನಿಮಾ ರಿಲೀಸ್ ಮಾಡ್ತಾರೆ. ಆದರೆ ನಾವು ಅಲ್ಲಿಗೆ ಹೋದರೆ ಸಿನಿಮಾ ರಿಲೀಸ್ ಗೆ ಬಿಡುತ್ತಿಲ್ಲ. ಇದರಿಂದ ಮುಂದಿನ ದಿನಗಳಲ್ಲಿ ಯಂಗ್ ಸ್ಟಾರ್ ಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನಮ್ಮ ಮೇಲೆ ಜವಾಬ್ದಾರಿ ಹೆಚ್ಚಿದೆ ಎಂದರು.

ನಾನೇನೋ ನಾಯಕ ನಟನಾಗಿ 50 ಸಿನಿಮಾ ಮಾಡಿದ್ದೇನೆ. ನಮ್ಮನ್ನೂ ಬಿಟ್ಟರೂ ಕೂಡ ಮುಂದೆ ಚಿತ್ರತಂಗಕ್ಕೆ ಬರುತ್ತಿರುವ ಹೊಸಬರ ಸ್ಥಿತಿ ಏನಾಗಬೇಕು ಈ ಬಗ್ಗೆ ಚರ್ಚೆ ಮಾಡಬೇಕಿದೆ ಹಾಗಾಗಿ ಈ ನಿರ್ಧಾರ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...