alex Certify BIG NEWS: ರಾಜಕೀಯ ರಂಗ ಪ್ರವೇಶ – ರಜನಿಕಾಂತ್ ಹೇಳಿದ್ದೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜಕೀಯ ರಂಗ ಪ್ರವೇಶ – ರಜನಿಕಾಂತ್ ಹೇಳಿದ್ದೇನು…?

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ರಂಗ ಪ್ರವೇಶದ ಬಗ್ಗೆ ಮತ್ತೆ ಗೊಂದಲಗಳು ಮುಂದುವರಿದಂತಿದೆ. ತಮ್ಮ ರಾಜಕೀಯ ಜೀವನದ ಬಗ್ಗೆ ಇಂದು ರಜನಿಕಾಂತ್ ಅವರು ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆಯಿತ್ತು.

ಆದರೆ ರಜನಿ ನಿರ್ಧಾರ ಇನ್ನೂ ಅಸ್ಪಷ್ಟವಾಗಿದೆ.

ಇಂದು ರಜನಿಕಾಂತ್ ತಮ್ಮ ರಾಜಕೀಯ ಪ್ರವೇಶ ಹಾಗೂ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ರಜನಿ ಮಕ್ಕಳ್ ಮಂಡ್ರಂ ಪಕ್ಷದ 52 ಪದಾಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚೆ ನಡೆಸಿದರು. ಈ ವೇಳೆ ಪದಾಧಿಕಾರಿಗಳ ಅಭಿಪ್ರಾಯವನ್ನು ಸಂಗ್ರಹಿಸಿದ್ದಾರೆ.

ಆರ್ ಎಂ ಎಂ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿರುವ ರಜನಿಕಾಂತ್, ಜನವರಿ ವೇಳೆಗೆ ಪಕ್ಷ ಪ್ರಾರಂಭಿಸಲು ಸಿದ್ಧತೆ ನಡೆಸುವ ಬಗ್ಗೆ ಕೇಳಿದ್ದಾರೆ. ಅಲ್ಲದೇ ತಾವು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಶೀಘ್ರವೇ ಪ್ರಕಟಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ತಮಿಳುನಾಡಿನಲ್ಲಿ ರಜನಿ ರಾಜಕೀಯ ಯುಗ ಆರಂಭದ ಬಗ್ಗೆ ಮತ್ತೆ ಕುತೂಹಲಗಳು ಮುಂದುವರಿದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...