alex Certify BIG NEWS: ರಾಬರ್ಟ್ ಅಭಿಮಾನಿಗಳ ಮೇಲೆ ಲಾಠಿ ಪ್ರಹಾರ; ಚಿತ್ರಮಂದಿರದ ಗ್ಲಾಸ್ ಒಡೆದು ದಾಂಧಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಬರ್ಟ್ ಅಭಿಮಾನಿಗಳ ಮೇಲೆ ಲಾಠಿ ಪ್ರಹಾರ; ಚಿತ್ರಮಂದಿರದ ಗ್ಲಾಸ್ ಒಡೆದು ದಾಂಧಲೆ

ಚಿತ್ರದುರ್ಗ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಫಸ್ಟ್ ಡೇ ಫಸ್ಟ್ ಶೋ ನೋಡಲು ಅಭಿಮಾನಿಗಳು ಥಿಯೇಟರ್ ಗಳಿಗೆ ಮುಗಿ ಬಿದ್ದಿದ್ದಾರೆ. ಹಲವೆಡೆ ಅಭಿಮಾನಿಗಳು ಟಿಕೆಟ್ ಸಿಗದೇ ನಿರಾಶರಾಗಿ ದಾಂಧಲೆ ನಡೆಸಿದ್ದರೆ, ಇನ್ನು ಕೆಲವೆಡೆಗಳಲ್ಲಿ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಕೊಪ್ಪಳದ ಗಂಗಾವತಿಯ ಚಂದ್ರಹಾಸ ಚಿತ್ರಮಂದಿರದಲ್ಲಿ ರಾಬರ್ಟ್ ವೀಕ್ಷಿಸಲು ಅಭಿಮಾನಿಗಳು ರಾತ್ರಿಯಿಂದ ಕಾಯುತ್ತಿದ್ದು, ಟಿಕೆಟ್ ಸಿಗದಿದ್ದಾಗ ರೊಚ್ಚಿಗೆದ್ದ ಅಭಿಮಾನಿಗಳು ಚಿತ್ರಮಂದಿರದ ಗೇಟ್ ಮುರಿಯಲೆತ್ನಿಸಿದ್ದಾರೆ. ಇದೇ ವೇಳೆ ಸಿನಿಮಾ ಆರಂಭವಾಗುತ್ತಿದ್ದಂತೆಯೇ ಸ್ಕ್ರೀನ್ ಮುಂದೆ ಹೋಗಿ ಜಮಾವಣೆಗೊಂಡ ಅಭಿಮಾನಿಗಳು ಅಲ್ಲಿಯೇ ಕುಣಿದು ಕುಪ್ಪಳಿಸಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದು, ಒಂದು ಹಂತದಲ್ಲಿ ಅಭಿಮಾನಿಗಳನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು.

‘ರಾಬರ್ಟ್’ ಭರ್ಜರಿ ಓಪನಿಂಗ್: ಮುಗಿಲುಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ

ಇನ್ನೊಂದೆಡೆ ಯಾದಗಿರಿಯ ಜಯಶ್ರೀ ಟಾಕೀಸ್ ನಲ್ಲಿ ಡಿ ಬಾಸ್ ಅಭಿಮಾನಿಗಳ ನೂಕುನುಗ್ಗಲು ನಡೆದಿದ್ದು, ಥಿಯೇಟರ್ ನ ಮುಖ್ಯದ್ವಾರದ ಬಾಗಿಲಿನ ಗ್ಲಾಸ್ ಒಡೆದು ಒಳ ನುಗ್ಗಿದ್ದಾರೆ. ಚಿತ್ರದುರ್ಗದ ವೆಂಕಟೇಶ್ವರ ಥಿಯೇಟರ್ ನಲ್ಲಿ ಕೂಡ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...