alex Certify BIG NEWS: ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಪ್ರಕರಣ – ಅಳಿಯ ಅನಿರುದ್ಧ ಹೇಳಿದ್ದೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಪ್ರಕರಣ – ಅಳಿಯ ಅನಿರುದ್ಧ ಹೇಳಿದ್ದೇನು…?

ಬೆಂಗಳೂರು: ಸಾಹಸ ಸಿಂಹ ದಿ.ಡಾ.ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ, ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ನಟ ಅನಿರುದ್ಧ, ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಮಾಡಿರುವುದು ಬೇಸರ ತಂದಿದೆ. ಆದರೆ ಈ ವಿಷಯವನ್ನು ಮುಂದುವರೆಸುವುದು ಬೇಡ. ಸಮಾಜದಲ್ಲಿ ಪ್ರೀತಿ ಬೆಳೆಯಬೇಕೆ ಹೊರತು ಧ್ವೇಷವಲ್ಲ. ಮುಂದೆ ಇಂಥಹ ಕೃತ್ಯ ಮರುಕಳಿಸಬಾರದು ಹಾಗಾಗಿ ಕಿಡಿಗೇಡಿಗಳನ್ನು ಪತ್ತೆ ಮಾಡಿ ಶಿಕ್ಷಿಸಬೇಕು ಎಂದು ಆಗ್ರಹಿಸಿದರು.

ಇನ್ನು ಸಚಿವ ವಿ.ಸೋಮಣ್ಣ ಅವರು ಕರೆ ಮಾಡಿ ಬೇರೆ ಸ್ಥಳದಲ್ಲಿ ಡಾ.ವಿಷ್ಣುವರ್ಧನ್ ಪ್ರತಿಮೆ ಸ್ಥಾಪಿಸುವ ಭರವಸೆ ನೀಡಿದ್ದಾರೆ. ಪ್ರತಿಮೆ ಮರುಸ್ಥಾಪನೆಯಾಗಬೇಕು ಎಂದು ನಾವು ಕೂಡ ಮನವಿ ಮಾಡಿದ್ದಾಗಿ ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...