alex Certify BIG NEWS: ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಹೊಸ ಟ್ವಿಸ್ಟ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಹೊಸ ಟ್ವಿಸ್ಟ್…!

ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ಈಗ ಸಿಬಿಐ ಕೈಗೆತ್ತಿಕೊಂಡಿದೆ. ಆರಂಭದಿಂದಲೂ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದ ಈ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.

ಹೌದು, ಸುಶಾಂತ್ ಸಿಂಗ್ ರಜಪೂತ್ ಅವರ ತಂದೆಯ ಪರ ವಕೀಲ ವಿಕಾಸ್ ಸಿಂಗ್ ಮಹತ್ವದ ಸಂಗತಿಯೊಂದನ್ನು ಬಹಿರಂಗಪಡಿಸಿದ್ದು, ಸುಶಾಂತ್ ಸಿಂಗ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಮುಂಬೈನ ಕೂಪರ್ ಆಸ್ಪತ್ರೆ ವೈದ್ಯರು ಸಾವಿನ ಸಮಯವನ್ನೇ ನಮೂದಿಸಿಲ್ಲ ಎಂಬ ಸಂಗತಿಯನ್ನು ತಿಳಿಸಿದ್ದಾರೆ.

ಅಲ್ಲದೇ ಸುಶಾಂತ್ ಸಿಂಗ್ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಬೇಕೆಂದೇ ವಿಳಂಬವಾಗಿ ಮಾಡಲಾಗಿದೆ ಎಂಬ ಮಾತುಗಳೂ ಸಹ ಕೇಳಿಬರುತ್ತಿದ್ದು, ಜೊತೆಗೆ ಘಟನೆ ನಡೆದ ದಿನದಂದು ಮರಣೋತ್ತರ ಪರೀಕ್ಷೆ ವೇಳೆ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ ಕೂಪರ್ ಆಸ್ಪತ್ರೆ ಶವಾಗಾರದ ಬಳಿ ಬಂದಿದ್ದು ಏಕೆ ಎಂಬ ಪ್ರಶ್ನೆಯೂ ಮೂಡಿದೆ. ಸಮಗ್ರ ತನಿಖೆಯಿಂದ ಈ ಎಲ್ಲ ವಿಚಾರಗಳಿಗೆ ತೆರೆ ಬೀಳಲಿದ್ದು, ಸಿಬಿಐ ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...