alex Certify ಅಲ್ಲು ಅರ್ಜುನ್ ‘ಪುಷ್ಪ’ ವಿರುದ್ಧ ಕನ್ನಡಿಗರ ಆಕ್ರೋಶ: ‘ಬಾಯ್ಕಾಟ್ ಪುಷ್ಪ’ ಅಭಿಯಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಲು ಅರ್ಜುನ್ ‘ಪುಷ್ಪ’ ವಿರುದ್ಧ ಕನ್ನಡಿಗರ ಆಕ್ರೋಶ: ‘ಬಾಯ್ಕಾಟ್ ಪುಷ್ಪ’ ಅಭಿಯಾನ

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ ಸಿನಿಮಾ ಡಿಸೆಂಬರ್ 17 ರಂದು ತೆರೆ ಕಾಣಲಿದೆ. ತೆಲುಗಿನಲ್ಲಿ ನಿರ್ಮಾಣವಾದ ಈ ಚಿತ್ರ ಬಹುಭಾಷೆಗಳಲ್ಲೂ ತೆರೆ ಕಾಣಲಿದೆ.

ಕರ್ನಾಟಕದಲ್ಲಿ ಕನ್ನಡ ವರ್ಷನ್ ಬಿಡುಗಡೆಗೆ ಹೆಚ್ಚಿನ ಅವಕಾಶ ನೀಡಿಲ್ಲ. ಬೇರೆ ಭಾಷೆಗೆ ಹೆಚ್ಚಿನ ಶೋ ನೀಡಲಾಗಿದ್ದು, ರಾಜ್ಯದಲ್ಲಿ ‘ಪುಷ್ಪ’ ಬಹಿಷ್ಕರಿಸುವಂತೆ #BoycottPushpaInKarnataka ಹ್ಯಾಶ್ ಟ್ಯಾಗ್ ನಲ್ಲಿ ಅಭಿಯಾನ ಆರಂಭಿಸಲಾಗಿದೆ.

ಕನ್ನಡ, ಮಲಯಾಳಂ, ತಮಿಳು, ಹಿಂದಿ ಭಾಷೆಗೆ ಡಬ್ ಆಗಿರುವ ‘ಪುಷ್ಪ’ ಚಿತ್ರದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್ ಮೊದಲಾದವರು ಅಭಿನಯಿಸಿದ್ದಾರೆ. ಕರ್ನಾಟಕದಲ್ಲಿ ಕನ್ನಡ ಚಿತ್ರವನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ‘ಪುಷ್ಪ’ ಬಹಿಷ್ಕರಿಸುವುದಾಗಿ ಅಭಿಯಾನ ನಡೆಸಲಾಗಿದೆ. ‘ಪುಷ್ಪ’ ಕನ್ನಡಕ್ಕೆ ಡಬ್ ಆಗಿದ್ದರೂ ಕೂಡ ತೆಲುಗು, ತಮಿಳು ಮಲಯಾಳಂ ವರ್ಷನ್ ಗಳಿಗೆ ಹೆಚ್ಚಿನ ಶೋ ನೀಡಲಾಗಿದೆ. ಕನ್ನಡ ಕಡೆಗಣಿಸಲಾಗಿದೆ ಎಂದು ದೂರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...