alex Certify ಸ್ಯಾಂಡಲ್ವುಡ್ ಗೆ ಸರ್ಕಾರದಿಂದ ಸಿಹಿಸುದ್ದಿ, ‘ಯುವರತ್ನ’ ಪುನೀತ್ ಧನ್ಯವಾದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಯಾಂಡಲ್ವುಡ್ ಗೆ ಸರ್ಕಾರದಿಂದ ಸಿಹಿಸುದ್ದಿ, ‘ಯುವರತ್ನ’ ಪುನೀತ್ ಧನ್ಯವಾದ

ಚಿತ್ರಮಂದಿರಗಳಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ. ಚಿತ್ರರಂಗದ ಮನವಿ ಮೇರೆಗೆ ಏಪ್ರಿಲ್ 7 ರವರೆಗೆ ಸರ್ಕಾರ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದ್ದು, ಇದಕ್ಕೆ ನಟ ಪುನೀತ್ ರಾಜಕುಮಾರ್ ಧನ್ಯವಾದ ಹೇಳಿದ್ದಾರೆ.

ಚಿತ್ರರಂಗದ ಮನವಿಗೆ ಸ್ಪಂದಿಸಿದ ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಅವರು, ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸಮಸ್ಯೆ ಹೇಳಿಕೊಂಡೆವು. ಮುಂಗಡ ಟಿಕೆಟ್ ಬುಕ್ಕಿಂಗ್ ಆಗಿದ್ದ ಕಾರಣ ಗೊಂದಲ ಉಂಟಾಗಿರುವ ಬಗ್ಗೆ ತಿಳಿಸಿದ್ದು, ಅವರು ನಮ್ಮ ಮಾತಿಗೆ ಗೌರವ ಕೊಟ್ಟು ಅವಕಾಶ ನೀಡಿದ್ದಾರೆ. ಸಂದರ್ಭದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.

ಚಿತ್ರರಂಗಕ್ಕೆ ತೊಂದರೆ ಕೊಡುವ ಉದ್ದೇಶವಿಲ್ಲ. ಮುಂಗಡ ಟಿಕೆಟ್ ಬುಕ್ಕಿಂಗ್ ಬಗ್ಗೆ ಮಾಹಿತಿ ಇರಲಿಲ್ಲ. ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...