alex Certify ನಾನು ಸತ್ತೋದ್ರೆ ನೀವೇ ಕಾರಣ: ಸಿಎಂ BSY, ಸಚಿವ ಸುಧಾಕರ್ ವಿರುದ್ಧ ನಿರ್ದೇಶಕ ಗುರುಪ್ರಸಾದ್ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾನು ಸತ್ತೋದ್ರೆ ನೀವೇ ಕಾರಣ: ಸಿಎಂ BSY, ಸಚಿವ ಸುಧಾಕರ್ ವಿರುದ್ಧ ನಿರ್ದೇಶಕ ಗುರುಪ್ರಸಾದ್ ಆಕ್ರೋಶ

ಸಾಮಾಜಿಕ ಜಾಲತಾಣದಲ್ಲಿ ನಿರ್ದೇಶಕ ಗುರುಪ್ರಸಾದ್ ರಾಜಕಾರಣಿಗಳು, ವ್ಯವಸ್ಥೆಯ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ, ವಿಜಯೇಂದ್ರ ಮತ್ತು ಸಚಿವ ಸುಧಾಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಾಮಾಣಿಕತೆ ಇದ್ದಲ್ಲಿ ಆಡಳಿತ ಇರುತ್ತದೆ. ಪ್ರಾಮಾಣಿಕತೆ ಇಲ್ಲದ ಕಡೆ ರಾಜಕೀಯ ಇರುತ್ತದೆ. ರಾಜಕಾರಣಿಗಳು ಯಾರೂ ಕೂಡ ಸಾಚಾ ಅಲ್ಲ. ರಾಜಕೀಯ ಮಾಡುವುದನ್ನು ಬಿಟ್ಟು ಜನರ ಸೇವೆ ಮಾಡಿ ಎಂದು ಹೇಳಿದ್ದಾರೆ.

ಗುರುಪ್ರಸಾದ್ ಅವರಿಗೆ ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಕಸ್ಮಾತ್ ಕೊರೊನಾದಿಂದ ನಾನು ಮೃತಪಟ್ಟರೆ ಸರ್ಕಾರವೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೋನಾ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ. ಕೊರೋನಾದಿಂದ ಮೃತಪಟ್ಟ ಪ್ರತಿಯೊಬ್ಬರ ಸಾವಿಗೆ ಮುಖ್ಯಮಂತ್ರಿ, ಆರೋಗ್ಯ ಸಚಿವರು ಮತ್ತು ವಿಜಯೇಂದ್ರ ನೇರ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಆಕಸ್ಮಿಕವಾಗಿ ಮೃತಪಟ್ಟರೆ ಸರ್ಕಾರವೇ ನೇರ ಕಾರಣ. ಇದೇ ನನ್ನ ಡೆತ್ ನೋಟ್. ಜನರ ಪ್ರಾಣ ಉಳಿಸಿ ಸ್ವಾಮಿ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти Найдите 3 различия на картинках с зайцами для людей Как пройти по крыше: