alex Certify ವೇದಿಕೆಯಲ್ಲೇ ಖ್ಯಾತ ಗಾಯಕ ಕೈಲಾಶ್ ಖೇರ್ ಗೆ ಅವಮಾನ: ಹಾಡುವಾಗ ಬಾಟಲಿ ಎಸೆದ ಕಿಡಿಗೇಡಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇದಿಕೆಯಲ್ಲೇ ಖ್ಯಾತ ಗಾಯಕ ಕೈಲಾಶ್ ಖೇರ್ ಗೆ ಅವಮಾನ: ಹಾಡುವಾಗ ಬಾಟಲಿ ಎಸೆದ ಕಿಡಿಗೇಡಿಗಳು

ಹೊಸಪೇಟೆ: ವಿಜಯನಗರ ಜಿಲ್ಲೆಯ ಹಂಪಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಖ್ಯಾತ ಗಾಯಕ ಕೈಲಾಶ್ ಖೇರ್ ಮೇಲೆ ಕಿಡಿಗೇಡಿಗಳು ಬಾಟಲಿ ಎಸೆದಿದ್ದಾರೆ.

ಕನ್ನಡ ಹಾಡು ಹಾಡಲಿಲ್ಲವೆಂದು ಕಿಡಿಗೇಡಿಗಳು ಇಂತಹ ಕೃತ್ಯವೆಸಗಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಿಂದ ನೀರಿನ ಬಾಟಲಿ ಎಸೆದು ಅವಮಾನ ಮಾಡಿದ್ದಾರೆ. ಹಂಪಿ ಉತ್ಸವದ ಗಾಯತ್ರಿ ಪೀಠದ ವೇದಿಕೆಯಲ್ಲಿ ಕಿಡಿಗೇಡಿಗಳು ಬಾಟಲಿ ಎಸೆದು ಅನುಚಿತ ವರ್ತನೆ ತೋರಿದ್ದಾರೆ. ಆದರೂ ಇದಕ್ಕೆ ತಲೆಕೆಡಿಸಿಕೊಳ್ಳದೇ ಕೈಲಾಶ್ ಖೇರ್ ಗಾಯನ ಮುಂದುವರೆಸಿದ್ದಾರೆ. ಬಾಟಲಿ ಎಸೆದ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...