alex Certify ಕೊರೋನಾ ಸಂಕಷ್ಟದ ಹೊತ್ತಲ್ಲಿ ಧನದಾಹಿಗಳ ಅಮಾನವೀಯ ವರ್ತನೆಗೆ ಜಗ್ಗೇಶ್ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಸಂಕಷ್ಟದ ಹೊತ್ತಲ್ಲಿ ಧನದಾಹಿಗಳ ಅಮಾನವೀಯ ವರ್ತನೆಗೆ ಜಗ್ಗೇಶ್ ಆಕ್ರೋಶ

ಬೆಂಗಳೂರು: ಕೊರೊನಾ ಸೋಂಕಿತರು ಮೃತಪಟ್ಟ ಸಂದರ್ಭದಲ್ಲಿ ಕೆಲವು ಆಸ್ಪತ್ರೆಗಳು ಮತ್ತು ಆಂಬುಲೆನ್ಸ್ ಸಿಬ್ಬಂದಿ ಅಮಾನವೀಯ ವರ್ತನೆ ತೋರುತ್ತಿರುವ ದೂರುಗಳು ಕೇಳಿಬಂದಿವೆ.

ಇದೇ ಸಂದರ್ಭದಲ್ಲಿ ನಟ ನವರಸನಾಯಕ ಜಗ್ಗೇಶ್ ಅವರು ಆಕ್ರೋಶ ಹೊರಹಾಕಿದ್ದಾರೆ. ಧನದಾಹಿಗಳ ಅಮಾನವೀಯ ವರ್ತನೆಯನ್ನು ಖಂಡಿಸಿರುವ ಜಗ್ಗೇಶ್, ಅಂತವರಿಗೆ ಹೊಡೆಯಬೇಕು ಅನ್ನಿಸಿತು ಎಂದು ಹೇಳಿದ್ದಾರೆ.

ಮೂವರು ಸ್ನೇಹಿತರು, ಇಬ್ಬರು ಬಂಧುಗಳು ಕೊರೊನಾದಿಂದ ಶುಕ್ರವಾರ ಮೃತಪಟ್ಟಿದ್ದಾರೆ. ಇನ್ನೂ ಮೂವರು ನರಳುತ್ತಿದ್ದಾರೆ. ಹೋಗಿ ಸಹಾಯ ಮಾಡಲು ಆಗದ ದರಿದ್ರ ಕಾಯಿಲೆ ಇದಾಗಿದೆ ಎಂದು ತಿಳಿಸಿದ್ದಾರೆ.

ಬಂಧುವಿನ ಅಂತ್ಯಸಂಸ್ಕಾರಕ್ಕೆ ಆಂಬುಲೆನ್ಸ್ ಸಿಬ್ಬಂದಿ ಮತ್ತು ಸ್ಮಶಾನದವರು 30,000 ರೂ. ಪೀಕಿದ್ದಾರೆ. ಹೋಗಿ ಚಪ್ಪಲಿಯಲ್ಲಿ ಹೊಡೆಯಬೇಕು ಅನ್ನಿಸಿತು. ಇಂಥವರಿಂದಲೇ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಕೆಲವರಿಂದಾಗಿ ಮನುಷ್ಯರ ಮೇಲೆ ನಂಬಿಕೆ ಸತ್ತುಹೋಗಿದೆ. ಇಂತಹ ಕ್ರೂರ ವರ್ತನೆಯಿಂದ ನೋವಾಗಿದೆ. ನನಗೆ ಅರಿಯದೆ ಕೆಟ್ಟ ಕೋಪ ಬರುತ್ತಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...