alex Certify ಬಿಡುಗಡೆ ತಡವಾಗಿದ್ದಕ್ಕೆ ಮಹತ್ವದ ನಿರ್ಧಾರ ಕೈಗೊಂಡ ‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪಬಾಬು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡುಗಡೆ ತಡವಾಗಿದ್ದಕ್ಕೆ ಮಹತ್ವದ ನಿರ್ಧಾರ ಕೈಗೊಂಡ ‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪಬಾಬು

ಬೆಂಗಳೂರು: ‘ಕೋಟಿಗೊಬ್ಬ 3’ ಚಿತ್ರದ ಬಿಡುಗಡೆ ಒಂದು ದಿನ ತಡವಾದ ಹಿನ್ನೆಲೆಯಲ್ಲಿ ನಿರ್ಮಾಪಕ ಸೂರಪ್ಪಬಾಬು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ವಿತರಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಚಿಂತನೆ ನಡೆಸಿದ್ದಾರೆ.

ವಿತರಕರಾದ ಗೌತಮ್ ಚಂದ್, ಎಂ.ಡಿ. ಖಾಜಾಪೀರ್ ಮತ್ತು ಕುಮಾರ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸೂರಪ್ಪಬಾಬು ನಿರ್ಧರಿಸಿದ್ದಾರೆ.

ಸಿನಿಮಾ ಬಿಡುಗಡೆ ಒಂದು ದಿನ ತಡವಾಗಿದ್ದಕ್ಕೆ 8 – 10 ಕೋಟಿ ರೂಪಾಯಿಯಷ್ಟು ನಷ್ಟವಾಗಿರುವ ಹಿನ್ನಲೆಯಲ್ಲಿ ತೊಂದರೆ ನೀಡಿದ ವಿತರಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಕೆಲವು ವಿತರಕರು ಸಮಯಕ್ಕೆ ಸರಿಯಾಗಿ ಹಣ ಕೊಡದೆ ಸಂಚು ಮಾಡಿದ್ದರು ಎಂದು ಅವರು ಆರೋಪಿಸಿದ್ದಾರೆ.

ಇಂತಹ ಸಂಚಿನಿಂದ ಚಿತ್ರನಟ ಮತ್ತು ನಿರ್ಮಾಣ ಸಂಸ್ಥೆಗೆ ಅಪಖ್ಯಾತಿ ಬಂದಿದೆ. ಹೀಗಾಗಿ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದ್ದಾರೆ. ಅಕ್ಟೋಬರ್ 14 ರಂದು ಆಯುಧಪೂಜೆ ದಿನ ‘ಕೋಟಿಗೊಬ್ಬ 3’ ಬಿಡುಗಡೆಯಾಗಬೇಕಿತ್ತು. ಆದರೆ ವಿತರಕರು ಒಪ್ಪಂದದಂತೆ ಹಣವನ್ನು ನೀಡಿರಲಿಲ್ಲ. ಈ ಕಾರಣದಿಂದ ಚಿತ್ರದ ಬಿಡುಗಡೆ ಒಂದು ದಿನ ತಡವಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...