alex Certify ಸಿನಿಮಾ ನಿರ್ಮಾಣದ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಖ್ಯಾತ ನಿರ್ದೇಶಕ ಶ್ರೀಕುಮಾರ್ ಮೆನನ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿನಿಮಾ ನಿರ್ಮಾಣದ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಖ್ಯಾತ ನಿರ್ದೇಶಕ ಶ್ರೀಕುಮಾರ್ ಮೆನನ್ ಅರೆಸ್ಟ್

ತಿರುವನಂತಪುರಂ: 5 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಮಲಯಾಳಂ ಚಿತ್ರ ನಿರ್ಮಾಪಕ ಮತ್ತು ನಿರ್ದೇಶಕ ಶ್ರೀಕುಮಾರ್ ಮೆನನ್ ಅವರನ್ನು ಬಂಧಿಸಲಾಗಿದೆ.

ಸಿನಿಮಾ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ 5 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದಡಿ ಪೊಲೀಸ್ ಅಧಿಕಾರಿಗಳು ಗುರುವಾರ ರಾತ್ರಿ ಅಲಪ್ಪುಳ ತಾಲೂಕಿನಲ್ಲಿರುವ ಅವರ ಮನೆಗೆ ತೆರಳಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆಲಪ್ಪುಳದ ಉದ್ಯಮಿಯೊಬ್ಬರಿಂದ 5 ಕೋಟಿ ರೂಪಾಯಿ ಪಡೆದಿದ್ದ ಶ್ರೀಕುಮಾರ್ ಸಿನಿಮಾ ನಿರ್ಮಾಣಕ್ಕೆ ಸಂಬಂಧಿಸಿದಂತೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ, ಒಪ್ಪಂದದನ್ವಯ ನಡೆದುಕೊಳ್ಳದೇ ವಂಚಿಸಿದ್ದಾರೆ. ಐಪಿಸಿ ಸೆಕ್ಷನ್ ಗಳಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಲಪ್ಪುಳ ಉಪ ಪೊಲೀಸ್ ವರಿಷ್ಠಾಧಿಕಾರಿ ಡಿ.ಕೆ. ಪೃಥ್ವಿರಾಜ್ ತಿಳಿಸಿದ್ದಾರೆ. ಮೋಹನ್ ಲಾಲ್ ಅಭಿನಯದ ‘ಒಡಿಯನ್’ ಮೊದಲಾದ ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...