alex Certify BREAKING NEWS: ಅಪಘಾತದಲ್ಲಿ ಕಿರುತೆರೆ ನಟಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಪಘಾತದಲ್ಲಿ ಕಿರುತೆರೆ ನಟಿ ದುರ್ಮರಣ

ಕೊಲ್ಲಾಪುರ: ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಮರಾಠಿ ನಟಿ ಕಲ್ಯಾಣಿ ಕುರಾಳೆ ಸಾವನ್ನಪ್ಪಿದ್ದಾರೆ.

32 ವರ್ಷದ ಕಲ್ಯಾಣಿ ಪ್ರಯಾಣಿಸುತ್ತಿದ್ದ ಮೋಟಾರ್‌ ಸೈಕಲ್‌ ಗೆ ಕಾಂಕ್ರೀಟ್ ಮಿಕ್ಸರ್ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

‘ತುಜ್ಯಹತ್ ಜೀವ್ ರಂಗಾ’ ಟಿವಿ ಧಾರಾವಾಹಿಯಲ್ಲಿ ಕಾಣಿಸಿಕೊಂಡಿರುವ ಕಲ್ಯಾಣಿ ಕುರಾಳೆ ಜಾಧವ್ ಅವರು ಶನಿವಾರ ಸಂಜೆ ಮನೆಗೆ ತೆರಳುತ್ತಿದ್ದಾಗ ಸಾಂಗ್ಲಿ-ಕೊಲ್ಹಾಪುರ ಹೆದ್ದಾರಿಯ ಹಾಲೊಂಡಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.

ಗಾಯಗೊಂಡ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆ ತಲುಪಿದಾಗ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು. ಟ್ರ್ಯಾಕ್ಟರ್ ಚಾಲಕನ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮೋಟಾರು ವಾಹನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕೊಲ್ಲಾಪುರ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...