alex Certify BIG NEWS: ರಜನಿ ರಾಜಕೀಯ ಪ್ರವೇಶಕ್ಕೆ ಹೆಚ್ಚಿದ ಒತ್ತಡ, ಆತ್ಮಹತ್ಯೆ ಯತ್ನ – ಬಿಗಿ ಬಂದೋಬಸ್ತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಜನಿ ರಾಜಕೀಯ ಪ್ರವೇಶಕ್ಕೆ ಹೆಚ್ಚಿದ ಒತ್ತಡ, ಆತ್ಮಹತ್ಯೆ ಯತ್ನ – ಬಿಗಿ ಬಂದೋಬಸ್ತ್

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಒತ್ತಡ ಮುಂದುವರೆದಿದ್ದು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ವೇಳೆಗೆ ರಜನಿಕಾಂತ್ ರಾಜಕೀಯ ಪ್ರವೇಶಿಸಬೇಕಿತ್ತು. ಹೊಸವರ್ಷದ ವೇಳೆಯಲ್ಲೇ ರಾಜಕೀಯ ಪಕ್ಷ ಘೋಷಣೆ ಮಾಡಬೇಕಿತ್ತು. ಆದರೆ, ದಿಢೀರ್ ಅನಾರೋಗ್ಯದ ಕಾರಣ ರಜನಿ ರಾಜಕೀಯದಿಂದಲೇ ದೂರ ಉಳಿಯುವ ನಿರ್ಧಾರ ಕೈಗೊಂಡಿದ್ದಾರೆ. ಅವರು ಹೆಚ್ಚಿನ ಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ತೆರಳಲಿದ್ದಾರೆ.

ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿದೆ. ರಜನಿಕಾಂತ್ ರಾಜಕೀಯದಿಂದ ಹಿಂದೆ ಸರಿಯಬಾರದೆಂಬ ಒತ್ತಾಯ ಅಭಿಮಾನಿಗಳಿಂದ ಕೇಳಿಬಂದಿದೆ. ರಜನಿ ರಾಜಕೀಯ ಪ್ರವೇಶಿಸಬೇಕೆಂದು ಒತ್ತಾಯಿಸಿ ಅಭಿಮಾನಿಗಳು ಮನೆ ಎದುರು ಧರಣಿ ನಡೆಸಿದ್ದು, ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ರಜನಿ ರಾಜಕೀಯಕ್ಕೆ ಬರಬೇಕೆಂದು ಅಭಿಮಾನಿ ಆತ್ಮಹತ್ಯೆಗೆ ಯತ್ನಿಸಿದ್ದು, ಹೀಗಾಗಿ ಅವರ ನಿವಾಸದ ಬಳಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಭಿಮಾನಿಗಳು ಮನೆ ಎದುರು ಜಮಾಯಿಸಿದಂತೆ ಕ್ರಮಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...