alex Certify ನಿಮ್ಮ ಅಸ್ತ್ರ TRP ನ್ಯೂಸ್ ಚಾನೆಲ್, ನನ್ನ ಅಸ್ತ್ರ ಶ್ರದ್ಧೆ: ಜಯ ಯಾರಿಗೆ…? ಕಾದು ನೋಡಿ; ರಕ್ಷಿತ್ ಶೆಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮ್ಮ ಅಸ್ತ್ರ TRP ನ್ಯೂಸ್ ಚಾನೆಲ್, ನನ್ನ ಅಸ್ತ್ರ ಶ್ರದ್ಧೆ: ಜಯ ಯಾರಿಗೆ…? ಕಾದು ನೋಡಿ; ರಕ್ಷಿತ್ ಶೆಟ್ಟಿ

ನಟ ರಕ್ಷಿತ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ವೈರಲ್ ಆಗಿದೆ. ಭಾರಿ ಸಂಖ್ಯೆಯ ಜನ ಕಾಮೆಂಟ್ ಮಾಡಿದ್ದು, ಹೆಚ್ಚಿನ ಸಂಖ್ಯೆಯ ಜನ ಶೇರ್, ಲೈಕ್ ಮಾಡಿದ್ದಾರೆ. ಅಂದ ಹಾಗೆ, ರಕ್ಷಿತ್ ಶೆಟ್ಟಿ ಮಾಡಿರುವ ಪೋಸ್ಟ್, ಹಲ್ಚಲ್ ಸೃಷ್ಟಿಸಿದೆ.

‘ನಿಮ್ಮ ಬಳಿ ಇರುವ ಅಸ್ತ್ರ ಟಿ.ಆರ್.ಪಿ.ಗೋಸ್ಕರ ನಡೆಸುತ್ತಿರುವ ಒಂದು ನ್ಯೂಸ್ ಚಾನೆಲ್. ನನ್ನ ಬಳಿ ಇರುವ ಅಸ್ತ್ರ ಕೆಲಸದ ಮೇಲಿರುವ ನನ್ನ ಶ್ರದ್ಧೆ. ಜೀವನದಲ್ಲಿ ಅಳವಡಿಸಿಕೊಂಡಿರುವ ನೀತಿ. ನನ್ನ ಸಿನಿಮಾ ಹಾಗೂ ಜನಬೆಂಬಲ ಇವೆರಡರಲ್ಲಿ ಜಯ ಯಾರಿಗೆ ಎಂದು ನೋಡಿ ಬಿಡೋಣ’ ಹೀಗೆಂದು ರಕ್ಷಿತ್ ಶೆಟ್ಟಿ ಪೋಸ್ಟ್ ಹಾಕಿದ್ದಾರೆ.

ಸುದೀರ್ಘ ಪತ್ರವೊಂದನ್ನು ಬರೆದಿರುವ ಅವರು,

ನನ್ನ ವೃತ್ತಿ ಜೀವನದಲ್ಲಿ ಯಾರೆಲ್ಲ ನನ್ನ ಜೊತೆ ಕೆಲಸ ಮಾಡಿದ್ದಾರೋ, ಅವರಲ್ಲಿ ಶೇಕಡ 90ರಷ್ಟು ಜನ ಇಂದಿಗೂ ನನ್ನ ಜೊತೆಯಲ್ಲಿ ಇರುವರು. ಬಿಟ್ಟು ಹೋದವರು ನನ್ನಿಂದ, ನನ್ನ ಕೆಲಸದಿಂದ ಏನಾದರೂ ಪಡೆದುಕೊಂಡು ಹೋಗಿದ್ದಾರೆ ಹೊರತು ಯಾರೂ ಕಳೆದುಕೊಂಡು ಹೋಗಿಲ್ಲ. ಕಳೆದುಕೊಂಡವನಿಗೆ ಮುಂದೆ ಹೋಗಿ ಸಹಾಯ ಮಾಡಿದ್ದೇನೆ ಅಥವಾ ಅವರಿಗೆ ಭುಜಕೊಟ್ಟು ನಿಂತಿದ್ದೇನೆ. ಇದಕ್ಕೆ ನನ್ನ ಜೊತೆ ಕೆಲಸ ಮಾಡಿದ ಪ್ರತಿಯೊಬ್ಬ ಲೈಟ್ ಆಫೀಸರ್ ನಿಂದ ಹಿಡಿದು ಟೆಕ್ನಿಷಿಯನ್ಸ್, ಡೈರೆಕ್ಟರ್ಸ್ ಹಾಗೂ ಪ್ರೊಡ್ಯೂಸರ್ಸ್ ಸಾಕ್ಷಿ. ನಾನು ಇದೆಲ್ಲದರ ಬಗ್ಗೆ ಎಲ್ಲೂ ಮಾತನಾಡಲು ಬಯಸುವುದಿಲ್ಲ, ನನಗೆ ಅದರ ಅಗತ್ಯವಿಲ್ಲ.

ಹಾಗಂತ ನಿಜ ಸುಳ್ಳಾಗುವುದಿಲ್ಲ…!

ವಾಹಿನಿಯಲ್ಲಿ ಕಳೆದ ಎರಡು ವರ್ಷಗಳಲ್ಲಿ ನನ್ನ ಬಗ್ಗೆ ಈ ರೀತಿಯ ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದಾರೆ. ನಾನು ಈ ಎಲ್ಲಾ ತೇಜೋವಧೆಯ ಪ್ರಯತ್ನಗಳನ್ನು ನಿರ್ಲಕ್ಷಿಸುತ್ತಾ ಬಂದಿದ್ದೇನೆ. ಇದಕ್ಕೆ ಕಾರಣ ನನ್ನ ಕೆಲಸ ಉತ್ತರ ಕೊಡುತ್ತದೆ ಎಂಬ ನನ್ನ ನಂಬಿಕೆ.

ಈಗ ಮತ್ತೊಮ್ಮೆ ಸುದ್ದಿವಾಹಿನಿ ಮಾಧ್ಯಮದ ನೈತಿಕ ಜವಾಬ್ದಾರಿ ಮರೆತು, ವೈಯಕ್ತಿಕ ದಾಳಿ ನಡೆಸಿ, ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೀಳುಮಟ್ಟದ ಕೆಲಸಕ್ಕೆ ಇಳಿದಿದೆ.

ಈ ಬಾರಿ ಇದನ್ನು ನಿರ್ಲಕ್ಷಿಸಲು ನನ್ನ ಮನಸ್ಸು ಒಪ್ಪುತ್ತಿಲ್ಲ. ಇದಕ್ಕೆ ಉತ್ತರ ಕೊಡುತ್ತೇನೆ. ಆದರೆ ಹತ್ತು ದಿನಗಳ ನಂತರ.

ಅಲ್ಲಿಯವರೆಗೆ ನಾನು ಕೆಲಸ ಮಾಡಿದ ಪ್ರತಿಯೊಂದು ಸಿನಿಮಾದ ಕುರಿತು, ಯಾವ ಯಾವ ಸತ್ಯ ಹೊರಗೆ ಬರುತ್ತದೋ? ಅವರವರ ಬಾಯಿಯಿಂದಲೇ ಹೊರಬರಲಿ. ನಾನು ಕಾದು ನೋಡುತ್ತೇನೆ.

ನನ್ನ ಉತ್ತರ ಜುಲೈ 11 ರಂದು ಕಾದುನೋಡಿ. Truth is mighty and must prevail

ನನ್ನ ಎಲ್ಲಾ ಏಳುಬೀಳುಗಳಲ್ಲಿ ನನ್ನ ಜೊತೆಗಿದ್ದ ನನ್ನ ಆತ್ಮೀಯರಿಗೂ, ಹಿತೈಷಿಗಳಿಗೂ, ಅಭಿಮಾನಿ ಬಳಗಕ್ಕೆ ಚಿರಋಣಿ.’ ಹೀಗೆಂದು ರಕ್ಷಿತ್ ಶೆಟ್ಟಿ ಪೋಸ್ಟ್ ಮಾಡಿದ್ದಾರೆ.

ನಿಮ್ಮ ಬಳಿ ಇರುವ ಅಸ್ತ್ರ TRPಗೋಸ್ಕರ ನಡೆಸುತ್ತಿರುವ ಒಂದು news channel. ನನ್ನ ಬಳಿ ಇರುವ ಅಸ್ತ್ರ ಕೆಲಸದ ಮೇಲಿರೋ ನನ್ನ ಶ್ರದ್ಧೆ, ಜೀವನದಲ್ಲಿ ಅಳವಡಿಸಿಕೊಂಡಿರುವ ನೀತಿ, ನನ್ನ ಸಿನಿಮಾ ಹಾಗು ಜನಬೆಂಬಲ. ಇವೆರಡರಲ್ಲಿ ಜಯ ಯಾರಿಗೆ ಎಂದು ನೋಡಿ ಬಿಡೋಣ…

Posted by Rakshit Shetty on Thursday, July 1, 2021

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...