alex Certify ಮನೆಯಲ್ಲೇ ನಟ, ರೌಡಿಶೀಟರ್ ಬರ್ಬರ ಹತ್ಯೆ: ಹಂತಕರ ಬಂಧನಕ್ಕೆ ಬಲೆ ಬೀಸಿದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲೇ ನಟ, ರೌಡಿಶೀಟರ್ ಬರ್ಬರ ಹತ್ಯೆ: ಹಂತಕರ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ಮಂಗಳೂರು: ಕನ್ನಡ, ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಅವರನ್ನು ಹತ್ಯೆ ಮಾಡಲಾಗಿದೆ. ಬಂಟ್ವಾಳದ ಬಿಸಿ ರೋಡ್ ಸಮೀಪ ಘಟನೆ ನಡೆದಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಬಸ್ತಿಪಡುವಿನ ಅಪಾರ್ಟ್ ಮೆಂಟ್ ನಲ್ಲಿ ಸುರೇಂದ್ರ ತಂಗಿದ್ದರು. ನಿನ್ನೆ ರಾತ್ರಿ ಇಲ್ಲವೇ, ಇವತ್ತು ಬೆಳಗ್ಗೆ ಅವರನ್ನು ಹತ್ಯೆ ಮಾಡಿರಬಹುದೆಂದು ಹೇಳಲಾಗಿದೆ. ಇಂದು ಮಧ್ಯಾಹ್ನದವರೆಗೆ ಮನೆಯ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಪರಿಶೀಲಿಸಿದಾಗ ಸುರೇಂದ್ರ ಅವರನ್ನು ಕೊಲೆ ಮಾಡಿರುವುದು ಗೊತ್ತಾಗಿದೆ.

ಹಣಕಾಸಿನ ವಿಚಾರಕ್ಕೆ ಅವರನ್ನು ಹತ್ಯೆ ಮಾಡಿರಬಹುದೆಂದು ಹೇಳಲಾಗಿದೆ. ಕನ್ನಡದ ‘ಸವರ್ಣದೀರ್ಘ ಸಂಧಿ’ ತುಳು ಚಿತ್ರ ‘ಚಾಲಿಪೋಲಿಲು’ ಸೇರಿದಂತೆ ಹಲವು ಚಿತ್ರಗಳಲ್ಲಿ ಸುರೇಂದ್ರ ಬಂಟ್ವಾಳ ಅಭಿನಯಿಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...