alex Certify ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಚೇತರಿಕೆಗೆ ಪ್ರಾರ್ಥಿಸಿದ ಅಭಿಮಾನಿಗಳಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಚೇತರಿಕೆಗೆ ಪ್ರಾರ್ಥಿಸಿದ ಅಭಿಮಾನಿಗಳಿಗೆ ಸಿಹಿ ಸುದ್ದಿ

ಚೆನ್ನೈ: ಕೊರೋನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.

ಅವರ ಚೇತರಿಕೆಗೆ ಪ್ರಾರ್ಥಿಸಿದ ಅಭಿಮಾನಿಗಳಿಗೆ ಎಸ್ಪಿಬಿ ಪುತ್ರ ಚರಣ್ ಸಿಹಿ ಸುದ್ದಿ ನೀಡಿದ್ದಾರೆ. ತಂದೆಯವರು ಶೇಕಡ 90 ರಷ್ಟು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನಿಮ್ಮೆಲ್ಲರ ನಿರಂತರ ಬೆಂಬಲ ಮತ್ತು ಪ್ರಾರ್ಥನೆಗಾಗಿ ಧನ್ಯವಾದಗಳು. ಅವರು ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದು ಚರಣ್ ಹೇಳಿದ್ದಾರೆ.

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೈದ್ಯರು ನಿಗಾ ವಹಿಸಿ ಕ್ಷಣಕ್ಷಣದ ಮಾಹಿತಿಯನ್ನು ಪಡೆದು ಎಸ್ಪಿಬಿ ಅವರಿಗೆ ಚಿಕಿತ್ಸೆ ಮುಂದುವರೆಸಿದ್ದು ಇವತ್ತಿನ ಹೆಲ್ತ್ ಬುಲೆಟ್ ಅಲ್ಲಿ ಅವರ ಆರೋಗ್ಯದ ಬಗ್ಗೆ ಮತ್ತೆ ಮಾಹಿತಿ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...