alex Certify 7 ಮಂದಿಗೆ ಹೊಸ ಬೆಳಕು ನೀಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

7 ಮಂದಿಗೆ ಹೊಸ ಬೆಳಕು ನೀಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. 7 ಜನರಿಗೆ ಹೊಸ ಬದುಕು ನೀಡಿದ್ದು, ಅಂಗಾಂಗ ದಾನದ ಮೂಲಕ ಮಾದರಿಯಾಗಿದ್ದಾರೆ.

ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಇರುವವರಿಗೆ ಮೂತ್ರಪಿಂಡ, ಕಣ್ಣು, ಯಕೃತ್, ಹೃದಯದ ಕವಾಟ ಅಳವಡಿಸಲಾಗಿದೆ.

ಮಿಂಟೋ ಆಸ್ಪತ್ರೆಯಲ್ಲಿ ಇಬ್ಬರು ಯುವಕರಿಗೆ ಒಂದೊಂದು ಕಣ್ಣು ಜೋಡಣೆ ಮಾಡಲಾಗಿದೆ. ಜಯದೇವ ಆಸ್ಪತ್ರೆಯಲ್ಲಿ ಹೃದಯದ ಕವಾಟ ಜೋಡಿಸಲಾಗಿದೆ. 52 ವರ್ಷದ ಪುರುಷನಿಗೆ, 34 ವರ್ಷದ ಮಹಿಳೆಗೆ ಮೂತ್ರಪಿಂಡ ಜೋಡಣೆ ಮಾಡಲಾಗಿದ್ದು, 50 ವರ್ಷದ ಪುರುಷನಿಗೆ ಯಕೃತ್ ಜೋಡಣೆ ಮಾಡಲಾಗಿದೆ. ಈ ಮೂಲಕ ಸಂಚಾರಿ ವಿಜಯ್ 7 ಜನರ ಬಾಳಿಗೆ ಬೆಳಕಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...