alex Certify BIG NEWS: ತಮಿಳು ಸಿನಿಮಾ ಪತ್ರಿಕಾಗೋಷ್ಠಿಗೆ ಕನ್ನಡ ಹೋರಾಟಗಾರರ ವಿರೋಧ: ಹೊರ ನಡೆದ ನಟ ಸಿದ್ದಾರ್ಥ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಮಿಳು ಸಿನಿಮಾ ಪತ್ರಿಕಾಗೋಷ್ಠಿಗೆ ಕನ್ನಡ ಹೋರಾಟಗಾರರ ವಿರೋಧ: ಹೊರ ನಡೆದ ನಟ ಸಿದ್ದಾರ್ಥ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು, ರೈತರು ಹೋರಾಟ ನಡೆಸಿದ್ದಾರೆ.

ಸೆ. 29 ರಂದು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಇದೇ ವೇಳೆ ಗುರುವಾರ ತಮಿಳು ನಟ ಸಿದ್ದಾರ್ಥ್ ಬೆಂಗಳೂರಿನಲ್ಲಿ ‘ಚಿಕ್ಕು’ ತಮಿಳು ಚಿತ್ರದ ಪತ್ರಿಕಾಗೋಷ್ಠಿ ಮತ್ತು ಪ್ರದರ್ಶನ ಆಯೋಜಿಸಿದ್ದಾರೆ.

ಪತ್ರಿಕಾಗೋಷ್ಠಿ ನಡೆಯುವ ಸ್ಥಳಕ್ಕೆ ಆಗಮಿಸಿದ ಕನ್ನಡ ಪರ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿದು ಹೋಗುತ್ತಿದೆ. ರಾಜ್ಯದಲ್ಲಿ ಹೋರಾಟ ನಡೆಯುತ್ತಿದೆ. ಇಲ್ಲಿ ತಮಿಳು ಸಿನಿಮಾ ಬಗ್ಗೆ ಪತ್ರಿಕಾಗೋಷ್ಠಿ ಮಾಡುತ್ತಿದ್ದೀರಿ. ಇನ್ನೊಂದು ದಿನ ಪತ್ರಿಕಾಗೋಷ್ಠಿ ಮಾಡಿ ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಎಸ್.ಆರ್.ವಿ. ಧಿಯೇಟರ್ ನಲ್ಲಿ ‘ಚಿಕ್ಕು’ ತಮಿಳು ಸಿನಿಮಾ ಕನ್ನಡ ಅವತರಣಿಕೆ ಪ್ರದರ್ಶನ ಆಯೋಜಿಸಲಾಗಿತ್ತು. ಸಿದ್ಧಾರ್ಥ್ ಸುದ್ದಿಗೋಷ್ಠಿ ನಡೆಸುವಾಗ ಕರವೇ ಸ್ವಾಭಿಮಾನಿ ಸೇನೆ ವಿರೋಧ ವ್ಯಕ್ತಪಡಿಸಿದೆ. ಇನ್ನೊಂದು ದಿನ ಪತ್ರಿಕಾಗೋಷ್ಠಿ ಇಟ್ಟುಕೊಳ್ಳಿ. ಈಗ ನಿಲ್ಲಿಸಿ ಎಂದು ಕನ್ನಡ ಪರ ಹೋರಾಟಗಾರರು ಆಗ್ರಹಿಸಿದ್ದು, ಈ ವೇಳೆ ಸಿದ್ದಾರ್ಥ್ ಪತ್ರಿಕಾಗೋಷ್ಠಿಯಿಂದ ಹೊರ ನಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...