alex Certify ಅಪಘಾತದಲ್ಲಿ ಸಾವಿಗೀಡಾದ ಯುವಕನ ಕುಟುಂಬಕ್ಕೆ ಸೋನು ಸೂದ್ ನೆರವಿನ ಭರವಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಘಾತದಲ್ಲಿ ಸಾವಿಗೀಡಾದ ಯುವಕನ ಕುಟುಂಬಕ್ಕೆ ಸೋನು ಸೂದ್ ನೆರವಿನ ಭರವಸೆ

ಮುಂಬೈ: ಸಿನೆಮಾದಲ್ಲಿ ಹೆಚ್ಚಾಗಿ ವಿಲನ್ ಪಾತ್ರ ಮಾಡುತ್ತಿದ್ದ ಬಾಲಿವುಡ್ ನಟ ಸೋನು ಸೂದ್ ಕಳೆದ ಲಾಕ್ ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಒಳಗಾದ ಸಾವಿರಾರು ಜನರಿಗೆ ಸಹಾಯ ಮಾಡುವ ಮೂಲಕ ನಿಜವಾದ ಹೀರೋ ಆಗಿದ್ದಾರೆ.‌ ಇತ್ತೀಚೆಗೆ ಅವರು ಮಾಡಿದ ಮತ್ತೊಂದು ಕಾರ್ಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಮುಂಬೈನಲ್ಲಿ ಮರ್ಸಿಡೀಸ್ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಡೆಲಿವರಿ ಬಾಯ್ ಒಬ್ಬನ ಕುಟುಂಬಕ್ಕೆ ಸಹಾಯ ಮಾಡುವುದಾಗಿ ಸೂದ್ ಭರವಸೆ ನೀಡಿದ್ದಾರೆ. ಟೈಫೂರ್ ತನ್ವೀರ್ ಶೇಖ್ ಎಂಬ ವಿದ್ಯಾರ್ಥಿ‌ ಕಾರು ಓಡಿಸುತ್ತಿದ್ದ. ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಘಟನೆ ನಡೆದಿತ್ತು.

ಅಪಘಾತದಲ್ಲಿ ಜೊಮೆಟೊ‌ ಡೆಲಿವರಿ ಬಾಯ್ ಸತೀಶ್ ಪ್ರಶಾಂತ‌ ಗುಪ್ತಾ ಎಂಬ 19 ವರ್ಷದ ಯುವಕ ತೀವ್ರ ಗಾಯಗೊಂಡಿದ್ದ. ಆತನನ್ನು ಕೋಕಿಲಾ ಬೆನ್ ದೀರು ಭಾಯ್ ಅಂಬಾನಿ ಆಸ್ಪತ್ರೆಗೆ ಕರೆದೊಯ್ದರೂ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.

ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಸೋನು ಸೂದ್ ಮೃತನ‌ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...