ಕೊರೊನಾ ಸೋಂಕಿಗೆ ತುತ್ತಾಗಿ ಕಳೆದ ಹಲವು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಪಂಚಭಾಷಾ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರ ಆರೋಗ್ಯ ಕುರಿತಂತೆ ಎಸ್ಪಿಬಿ ಪುತ್ರ ಚರಣ್ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಎಲ್ಲಾ ತರಹದ ಚಿಕಿತ್ಸೆಗೆ ತಂದೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಫಿಸಿಯೋಥೆರಪಿ ಮಾಡಲಾಗುತ್ತಿದೆ. ಇನ್ನು ಅವರಿಗೆ ಆಹಾರವನ್ನು ನೇರವಾಗಿಯೇ ನೀಡಲಾಗುತ್ತಿದೆ. ಆದಷ್ಟು ಬೇಗ ಗುಣಮುಖರಾಗುತ್ತಾರೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ ಚರಣ್.
ಕಳೆದ ಕೆಲವು ದಿನಗಳ ಹಿಂದೆ ಎಸ್ಪಿಬಿಯವರ ಆರೋಗ್ಯ ಗಂಭೀರವಾಗುತ್ತಿದಂತೆ ಅವರು ಬೇಗ ಗುಣಮುಖರಾಗಲಿ ಎಂದು ಇಡೀ ದೇಶದ್ಯಾಂತ ಅವರ ಕೋಟ್ಯಾಂತರ ಅಭಿಮಾನಿಗಳು ಪ್ರಾರ್ಥನೆ ಮಾಡಿದ್ದರು. ಇಂದು ಆ ಪ್ರಾರ್ಥನೆಗೆ ಫಲ ಸಿಕ್ಕಂತಾಗಿದ್ದು, ಎಸ್ಪಿಬಿ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ.