alex Certify ಚೇತರಿಸಿಕೊಳ್ಳದ SP ಬಾಲಸುಬ್ರಹ್ಮಣ್ಯಂ ಮತ್ತಷ್ಟು ಗಂಭೀರ: ಹಾಡು ಕೇಳಿಸಿ ಜಗತ್ತಿನಾದ್ಯಂತ ಪ್ರಾರ್ಥನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚೇತರಿಸಿಕೊಳ್ಳದ SP ಬಾಲಸುಬ್ರಹ್ಮಣ್ಯಂ ಮತ್ತಷ್ಟು ಗಂಭೀರ: ಹಾಡು ಕೇಳಿಸಿ ಜಗತ್ತಿನಾದ್ಯಂತ ಪ್ರಾರ್ಥನೆ

ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಚೇತರಿಕೆಗೆ ಹಾರೈಸಿ ಜಗತ್ತಿನಾದ್ಯಂತ ಅಭಿಮಾನಿಗಳು ಮತ್ತು ಗಣ್ಯರು ಪ್ರಾರ್ಥಿಸಿದ್ದಾರೆ.

ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್, ಇಳಯರಾಜ, ಎ.ಆರ್. ರೆಹಮಾನ್ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ. ಅಪಾರ ಅಭಿಮಾನಿಗಳು ಎಸ್.ಪಿ.ಬಿ. ಹಾಡು ಹಾಕಿ ಪ್ರಾರ್ಥಿಸಿದ್ದಾರೆ.

ಎಸ್.ಪಿ. ಬಾಲಸುಬ್ರಹ್ಮಣ್ಯಂಗೆ ಕೊರೋನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಐಸಿಯುನಲ್ಲಿ ಜೀವ ರಕ್ಷಕ ಸಾಧನಗಳೊಂದಿಗೆ ತಜ್ಞ ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಅವರ ಆರೋಗ್ಯದ ಕುರಿತಾಗಿ ಪುತ್ರ ಚರಣ್ ಮಾಹಿತಿ ನೀಡಿದ್ದು, ನಮ್ಮ ತಂದೆ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ನಮಗೆ ಒಂದು ನಂಬಿಕೆ ಇದೆ ಮತ್ತು ಭರವಸೆ ಇದೆ. ನಿಮ್ಮೆಲ್ಲರ ಪ್ರಾರ್ಥನೆಗಳು ನಮ್ಮ ತಂದೆಯ ಮೇಲಿದೆ. ನಿಮ್ಮ ಪ್ರಾರ್ಥನೆ ನಿಜವಾಗಿಯೂ ಅವರಿಗೆ ಸಹಾಯವಾಗುತ್ತದೆ. ಆದಷ್ಟು ಬೇಗ ಅವರು ಚೇತರಿಸಿಕೊಳ್ಳಲಿದ್ದಾರೆ. ನಾನು ಸಂಗೀತ, ಚಿತ್ರರಂಗಕ್ಕೆ ಧನ್ಯವಾದ ಹೇಳುತ್ತೇನೆ. ನಿಮ್ಮ ಅಭಿಮಾನಕ್ಕೆ ನಮ್ಮ ಕುಟುಂಬ ಆಭಾರಿಯಾಗಿದೆ.

ಇದೇ ವೇಳೆ ಅವರ ಆರೋಗ್ಯದಲ್ಲಿ ಚೇತರಿಕೆಗೆ ಪ್ರಾರ್ಥಿಸಿ ಜಗತ್ತಿನಾದ್ಯಂತ ಅಭಿಮಾನಿಗಳು ಮತ್ತು ಗಣ್ಯರು ಎಸ್.ಪಿ. ಬಾಲಸುಬ್ರಹ್ಮಣ್ಯಂ ಹಾಡುಗಳ ಗುಣಗಾನ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...