alex Certify ಚಿತ್ರೀಕರಣ ವೇಳೆ ಖ್ಯಾತ ಸಾಹಸ ನಿರ್ದೇಶಕ ರವಿವರ್ಮಗೆ ಗಾಯ, ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರೀಕರಣ ವೇಳೆ ಖ್ಯಾತ ಸಾಹಸ ನಿರ್ದೇಶಕ ರವಿವರ್ಮಗೆ ಗಾಯ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ಸಾಹಸ ನಿರ್ದೇಶಕ ರವಿವರ್ಮ ಚಿತ್ರಿಕರಣದ ವೇಳೆ ಗಾಯಗೊಂಡಿದ್ದಾರೆ. ವಿಕ್ರಮ್ ರವಿಚಂದ್ರನ್ ಅಭಿನಯದ ‘ಮುಧೋಳ್’ ಸಿನಿಮಾ ಸಾಹಸ ದೃಶ್ಯದ ಚಿತ್ರೀಕರಣ ಸಂದರ್ಭದಲ್ಲಿ ಘಟನೆ ನಡೆದಿದೆ.

ಸಾಹಸ ದೃಶ್ಯದ ಚಿತ್ರೀಕರಣಕ್ಕಾಗಿ ನಿರ್ಮಿಸಿದ್ದ ರೋಪ್ ಹರಿದು ರವಿವರ್ಮ ಅವರಿಗೆ ಪೆಟ್ಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆತಂಕ ಪಡುವಂತಹದು ಏನೂ ಇಲ್ಲ. ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ಹೇಳಿದ್ದಾರೆ.

‘ಮುಧೋಳ್’ ಆಕ್ಷನ್ ಥ್ರಿಲ್ಲರ್ ಆಗಿದ್ದು, ರವಿವರ್ಮ ಸಾಹಸ ನಿರ್ದೇಶಕರಾಗಿದ್ದಾರೆ. ಕಷ್ಟದ ಸ್ಟಂಟ್ ಗಳನ್ನೇ ಕಂಪೋಸ್ ಮಾಡುವ ರವಿವರ್ಮ ಅವರು ‘ಮುಧೋಳ್’ ಚಿತ್ರದಲ್ಲಿಯೂ ಅಂತಹ ದೃಶ್ಯವನ್ನು ಕಂಪೋಸ್ ಮಾಡಿದ್ದು, ದೃಶ್ಯ ಚಿತ್ರೀಕರಣ ವೇಳೆ ಗಾಯಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...