alex Certify BIG NEWS: ಕಿಚ್ಚ ಸುದೀಪ್ ಗೆ ಕೊರೋನಾ ವದಂತಿ: ಶುದ್ಧ ಸುಳ್ಳು ಎಂದು ಜಾಕ್ ಮಂಜು ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಿಚ್ಚ ಸುದೀಪ್ ಗೆ ಕೊರೋನಾ ವದಂತಿ: ಶುದ್ಧ ಸುಳ್ಳು ಎಂದು ಜಾಕ್ ಮಂಜು ಸ್ಪಷ್ಟನೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರಿಗೆ ವೈರಲ್ ಫೀವರ್ ಇರುವುದರಿಂದ ವಿಶ್ರಾಂತಿಯಲ್ಲಿದ್ದಾರೆ. ಇತ್ತೀಚೆಗೆ ಕ್ರಿಕೆಟ್ ಆಡುವಾಗ ಮಳೆಯಲ್ಲಿ ನೆನೆದಿದ್ದರು. ಹಾಗಾಗಿ, ಜ್ವರ ಬಂದಿದ್ದು, ವಿಶ್ರಾಂತಿಯಲ್ಲಿದ್ದಾರೆ ಎಂದು ಸುದೀಪ್ ಆಪ್ತ ಹಾಗೂ ನಿರ್ಮಾಪಕ ಜಾಕ್ ಮಂಜು ಸ್ಪಷ್ಟನೆ ನೀಡಿದ್ದಾರೆ.

ಸುದೀಪ್ ಅವರಿಗೆ ಕೊರೋನ ಪಾಸಿಟಿವ್ ಎನ್ನುವುದು ಶುದ್ಧ ಸುಳ್ಳು. ‘ವಿಕ್ರಾಂತ್ ರೋಣ’ ಸಿನಿಮಾ ಪ್ರಚಾರಕ್ಕೆ ಸುದೀಪ್ ಸಿದ್ದವಾಗುತ್ತಿದ್ದರು. ಜ್ವರದ ಕಾರಣ ವಿಶ್ರಾಂತಿಯಲ್ಲಿದ್ದಾರೆ.

ಸುದೀಪ್ ಅವರಿಗೆ ಕೊರೋನಾ ಸೋಂಕು ತಗುಲಿದೆ ಎಂದು ವದಂತಿ ಹರಡಿತ್ತು. ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ಪ್ರಚಾರಕ್ಕೆ ಗೈರಾಗುವ ಸಾಧ್ಯತೆ ಇದೆ ಎಂದೆಲ್ಲಾ ಹೇಳಲಾಗಿತ್ತು. ಆದರೆ, ಅವರು ಜ್ವರದ ಕಾರಣ ವಿಶ್ರಾಂತಿಯಲ್ಲಿದ್ದಾರೆ.

ಇತ್ತೀಚೆಗೆ ಸುದೀಪ್ ದೆಹಲಿಗೆ ಹೋಗಿ ಬಂದಿದ್ದರು. ಹೈದರಾಬಾದ್ ಮತ್ತು ಚೆನ್ನೈನಲ್ಲಿ ಸಿನಿಮಾ ಪ್ರಚಾರಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿತ್ತು. ಆದರೆ, ಸದ್ಯಕ್ಕೆ ಜ್ವರ ಇರುವುದರಿಂದ ವಿಶ್ರಾಂತಿ ಪಡೆಯುತ್ತಿದ್ದಾರೆ. ಇನ್ನೆರಡು ದಿನಗಳ ನಂತರ ‘ವಿಕ್ರಾಂತ್ ರೋಣ’ ಸಿನಿಮಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಜುಲೈ 28ರಂದು ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ ಬಿಡುಗಡೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...