alex Certify ಕಿಚ್ಚ ಸುದೀಪ್ ಅಭಿಮಾನಿಗಳ ಅತಿರೇಕದ ವರ್ತನೆ, ಕೋಣ ಬಲಿ ಕೊಟ್ಟು ಕಟೌಟ್ ಗೆ ರಕ್ತಾಭಿಷೇಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಚ್ಚ ಸುದೀಪ್ ಅಭಿಮಾನಿಗಳ ಅತಿರೇಕದ ವರ್ತನೆ, ಕೋಣ ಬಲಿ ಕೊಟ್ಟು ಕಟೌಟ್ ಗೆ ರಕ್ತಾಭಿಷೇಕ

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಬಂಡ್ರಿ ಗ್ರಾಮದಲ್ಲಿ ಸುದೀಪ್ ಅಭಿಮಾನಿಗಳು ಅತಿರೇಕದ ವರ್ತನೆ ತೋರಿದ್ದಾರೆ.

ನೆಚ್ಚಿನ ನಟ, ಅಭಿನಯ ಚಕ್ರವರ್ತಿ ಸುದೀಪ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕೋಣ ಬಲಿ ಕೊಟ್ಟಿದ್ದು ವಿವಾದಕ್ಕೆ ಕಾರಣವಾಗಿದೆ. ಬಂಡ್ರಿ ಗ್ರಾಮದ ಕಿಚ್ಚ ಸುದೀಪ್ ಬಾಯ್ಸ್ ಅಭಿಮಾನಿಗಳ ಸಂಘದಿಂದ ಬೃಹತ್ ಕಟೌಟ್ ನಿರ್ಮಿಸಿದ್ದು, ಹೂವಿನ ಹಾರಹಾಕಿ ಸಂಭ್ರಮಾಚರಣೆ ಮಾಡಿದ್ದಾರೆ. ಇದೇ ವೇಳೆ ಕೋಣದ ಬಲಿ ನೀಡಿ ರಕ್ತವನ್ನು ಸುದೀಪ್ ಕಟೌಟ್ ಗೆ ಎರಚಲಾಗಿದೆ. ಘಟನೆಯ ದೃಶ್ಯಗಳು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...