alex Certify ಪುನೀತ್ ಸಮಾಧಿಗೆ ನಮನ ಸಲ್ಲಿಸಿ ಕಣ್ಣೀರಿಟ್ಟ ನಟ ಸೂರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುನೀತ್ ಸಮಾಧಿಗೆ ನಮನ ಸಲ್ಲಿಸಿ ಕಣ್ಣೀರಿಟ್ಟ ನಟ ಸೂರ್ಯ

ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಮಾಧಿಗೆ ತಮಿಳು ನಟ ಸೂರ್ಯ ನಮನ ಸಲ್ಲಿಸಿದ್ದಾರೆ.

ಶಿವರಾಜ್ ಕುಮಾರ್ ಅವರೊಂದಿಗೆ ಕಂಠೀರವ ಸ್ಟುಡಿಯೋಗೆ ಆಗಮಿಸಿದ ಅವರು ಪುಷ್ಪನಮನ ಸಲ್ಲಿಸಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ನಮನ ಸಲ್ಲಿಸಿದ ನಂತರ ಮಾತನಾಡಿದ ಸೂರ್ಯ, ರಾಜ್ ಕುಟುಂಬದವರೊಂದಿಗೆ ಅವಿನಾಭಾವ ಸಂಬಂಧವಿತ್ತು. ಪುನೀತ್ ರಾಜಕುಮಾರ್ ಸದಾ ಹಸನ್ಮುಖಿಯಾಗಿದ್ದರು. ಪುನೀತ್ ಎಲ್ಲಾ ಫೋಟೋಗಳಲ್ಲಿಯೂ ನಗುಮುಖವೇ ಇರುತ್ತದೆ. ಪುನೀತ್ ಅವರ ಬಗ್ಗೆ ನಮ್ಮ ತಾಯಿ ಸದಾ ಮಾತನಾಡುತ್ತಿದ್ದರು. ಪುನೀತ್ ರಾಜಕುಮಾರ್ ನನಗಿಂತ ಮೂರು ತಿಂಗಳು ದೊಡ್ಡವರು. ಆದರೆ, ಪುನೀತ್ ಇಷ್ಟು ಬೇಗ ನಮ್ಮನ್ನು ಅಗಲಿದ್ದು ನೋವಾಗಿದೆ. ಚಿತ್ರರಂಗದ ಪ್ರತಿಯೊಬ್ಬರಿಗೆ ಅತೀವ ದುಃಖವಾಗಿದೆ ಎಂದು ಸೂರ್ಯ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...