alex Certify BREAKING NEWS: ತಡರಾತ್ರಿ ಖ್ಯಾತ ನಟ ಕಮಲ್ ಹಾಸನ್ ಮೇಲೆ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ತಡರಾತ್ರಿ ಖ್ಯಾತ ನಟ ಕಮಲ್ ಹಾಸನ್ ಮೇಲೆ ದಾಳಿ

ಚೆನ್ನೈ: ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ಭರಾಟೆ ಜೋರಾಗಿದ್ದು, ಪ್ರಚಾರಕ್ಕೆ ತೆರಳುತ್ತಿದ್ದ ಹಿರಿಯ ನಟ ಹಾಗೂ ಮಕ್ಕಳ್ ನೀದಿ ಮಯ್ಯುಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರ ಮೇಲೆ ಕಾಂಚಿಪುರಂನಲ್ಲಿ ದಾಳಿ ನಡೆಸಲಾಗಿದೆ.

ಭಾನುವಾರ ತಡರಾತ್ರಿ ಕಾಂಚಿಪುರಂ ನಲ್ಲಿ ಹೋಟೆಲ್ ಕಡೆಗೆ ತೆರಳುತ್ತಿದ್ದ ಕಮಲ್ ಹಾಸನ್ ಅವರ ಕಾರಿನ ಮೇಲೆ ಯುವಕನೊಬ್ಬ ದಾಳಿ ಮಾಡಿದ್ದು ವಾಹನದ ವಿಂಡ್ ಸ್ಕ್ರೀನ್ ಹಾನಿಗೊಳಗಾಗಿದೆ. ಘಟನೆಯಲ್ಲಿ ಕಮಲ್ ಹಾಸನ್ ಅವರಿಗೆ ಯಾವುದೇ ಗಾಯಗಳಾಗಿಲ್ಲ.

ಮಕ್ಕಳ್ ನೀಧಿ ಮಯ್ಯುಂ ಪಕ್ಷದ ಮುಖಂಡ ಮತ್ತು ನಿವೃತ್ತ ಐಪಿಎಸ್ ಅಧಿಕಾರಿ ಎ.ಜಿ. ಮೌರ್ಯ ಈ ಬಗ್ಗೆ ಮಾಹಿತಿ ನೀಡಿದ್ದು, ನಮ್ಮ ಪಕ್ಷದ ಮುಖ್ಯಸ್ಥರ ಕಾರ್ ವಿಂಡ್ ಸ್ಕ್ರೀನ್ ಯುವಕನ ದಾಳಿಯಿಂದಾಗಿ ಹಾನಿಯಾಗಿದೆ. ಕಮಲ್ ಹಾಸನ್ ಅವರ ಮೇಲೆ ದಾಳಿ ಯತ್ನಿಸಿದ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಇಂತಹ ಘಟನೆಗಳಿಂದ ನಮ್ಮ ಪಕ್ಷ ಹೆದರಲ್ಲ ಅವರು ತಿಳಿಸಿದ್ದಾರೆ.

ಮದ್ಯದ ಅಮಲಿನಲ್ಲಿದ್ದ ಯುವಕನ ಮೇಲೆ ಮಕ್ಕಳ ನೀಧಿ ಮಯ್ಯುಂ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹಲ್ಲೆ ಮಾಡಿ ಆತನನ್ನು ಪೊಲೀಸ್ ವಶಕ್ಕೆ ನೀಡಲಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...