alex Certify ಬಿಗ್ ನ್ಯೂಸ್: ನಿವಾಸದಲ್ಲೇ ನಟಿ ಆತ್ಮಹತ್ಯೆ, ಪೊಲೀಸರಿಂದ ತನಿಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ನಿವಾಸದಲ್ಲೇ ನಟಿ ಆತ್ಮಹತ್ಯೆ, ಪೊಲೀಸರಿಂದ ತನಿಖೆ

ಹೈದರಾಬಾದ್: ತೆಲುಗು ಕಿರುತೆರೆ ನಟಿ ಶ್ರಾವಣಿ ಕೊಂಡಪಲ್ಲಿ ಹೈದರಾಬಾದ್ ಎಸ್.ಆರ್. ನಗರದ ಮಧುರಾ ನಗರದಲ್ಲಿರುವ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಮೌನರಾಗಂ’, ‘ಮನಸು ಮಮತ’ ಧಾರಾವಾಹಿಗಳ ಮೂಲಕ ಮನೆ ಮಾತಾಗಿದ್ದ ಶ್ರಾವಣಿ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಂಧ್ರಪ್ರದೇಶದ ಕಾಕಿನಾಡ ಮೂಲದ ಶ್ರಾವಣಿ ಹೈದರಾಬಾದ್ ನಲ್ಲಿ ನೆಲೆಸಿದ್ದರು.

ದೇವರಾಜರೆಡ್ಡಿ ಎಂಬಾತ ಪ್ರೀತಿಸುವ ನಾಟಕವಾಡಿ ಆಕೆಯೊಂದಿಗೆ ತೆಗೆಸಿಕೊಂಡ ವೈಯಕ್ತಿಕ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿ ಹಣ ಪಡೆದುಕೊಳ್ಳುತ್ತಿದ್ದ ಎಂದು ನಟಿ ದೂರು ನೀಡಿದ್ದಳು. ಆತನ ಕಿರುಕುಳ ಹೆಚ್ಚಾದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...