alex Certify ಹುಲಿ ಉಗುರು ಬಳಿಕ ಮತ್ತೊಂದು ವಿವಾದದಲ್ಲಿ ‘ಬಿಗ್ ಬಾಸ್’ ಸ್ಪರ್ಧಿ ವರ್ತೂರು ಸಂತೋಷ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಲಿ ಉಗುರು ಬಳಿಕ ಮತ್ತೊಂದು ವಿವಾದದಲ್ಲಿ ‘ಬಿಗ್ ಬಾಸ್’ ಸ್ಪರ್ಧಿ ವರ್ತೂರು ಸಂತೋಷ್

ಬೆಂಗಳೂರು: ಹುಲಿ ಉಗುರು ಪ್ರಕರಣದ ನಂತರ ‘ಬಿಗ್ ಬಾಸ್’ ಸ್ಪರ್ಧಿ ವರ್ತೂರ್ ಸಂತೋಷ್ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಸಂತೋಷ್ ಮದುವೆ ವಿಚಾರದಲ್ಲಿ ವಿವಾದ ಉಂಟಾಗಿದೆ.

ಮದುವೆ ಆಗಿರುವುದನ್ನು ಅವರು ಮುಚ್ಚಿಟ್ಟಿದ್ದಾರೆ. ಕೊರೋನಾ ಸಂದರ್ಭದಲ್ಲಿ ವರ್ತೂರು ಸಂತೋಷ್ ಗೆ ಮದುವೆಯಾಗಿತ್ತು. ದಂಪತಿಗೆ ಒಂದು ಹೆಣ್ಣು ಮಗು ಸಹ ಜನಿಸಿತ್ತು. ಮಾರ್ಚ್ 5, 2020 ರಂದು ವರ್ತೂರು ಸಂತೋಷ್ ಗೆ ಮದುವೆಯಾಗಿದೆ ಎಂದು ಹೇಳಲಾಗಿದೆ.

ನಂತರ ವರ್ತೂರು ಸಂತೋಷ್ ಮತ್ತು ಪತ್ನಿ ಪ್ರತ್ಯೇಕವಾಗಿದ್ದರು. ಬಿಗ್ ಬಾಸ್ ಮನೆಯಲ್ಲಿಯೂ ಮದುವೆ ಬಗ್ಗೆ ಯಾರಿಗೂ ಗೊತ್ತಿರಲಿಲ್ಲ. ಪತ್ನಿಗೆ ಅವರು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಅವರಿಗೆ ಈಗಾಗಲೇ ಮದುವೆಯಾಗಿದೆ. ನನ್ನ ಮಗಳನ್ನು ಮದುವೆಯಾಗಿ ಮೋಸ ಮಾಡಿದ್ದಾರೆ. ಮದುವೆಯಾದ ಮೇಲೆ ಮಗಳಿಗೆ ಹೊಡೆಯುತ್ತಿದ್ದ. ಮಗಳು ತವರಿಗೆ ಬಂದು ಎರಡು ವರ್ಷವಾಯಿತು. ಹೊಸಕೋಟೆ ಬಳಿಯ ಕೆಎಂಎಂ ರಾಯಲ್ ನಲ್ಲಿ ಮದುವೆಯಾಗಿದೆ ಎಂದು ಸಂತೋಷ್ ಮಾವ ಸೋಮನಾಥ್ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jak se Jak teplota vody Proč semena papriky neklíčí a jak Vědci objevili nejzdravější sacharidy Vepřový jazyk: Tajemství přípravy lahodné lahůdky Odborník na výživu přináší