ಬೆಂಗಳೂರು: ಲಾಕ್ ಡೌನ್ ಜಾರಿ ಆದಾಗಿನಿಂದ ಸಿನಿಮಾ, ಕಿರುತೆರೆ ಚಿತ್ರೀಕರಣ ಸೇರಿದಂತೆ ಬಹುತೇಕ ಎಲ್ಲಾ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿದೆ. ಹೀಗಿದ್ದರೂ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಮಾತ್ರ ಆಕ್ಷನ್ ಕಟ್ ಹೇಳಿದ್ದಾರೆ.
ಅಂದ ಹಾಗೆ, ಅವರು ನಿರ್ದೇಶನ ಮಾಡಿ ಆಕ್ಷನ್ ಕಟ್ ಹೇಳಿದ್ದು ಸಿನಿಮಾಗಾಗಿ ಅಲ್ಲ. ಬದಲಿಗೆ ಪೊಲೀಸ್ ಇಲಾಖೆಯ ಡಾಕ್ಯುಮೆಂಟರಿಗಾಗಿ ಲಾಕ್ಡೌನ್ ನಡುವೆ ಪೊಲೀಸ್ ಸಿಬ್ಬಂದಿ ಕೆಲಸದ ಜಾಗೃತಿಗಾಗಿ ಚಿತ್ರೀಕರಣ ನಡೆಸಲಾಗಿದೆ.
ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ ರಾವ್ ಹಾಗೂ ಅನೇಕ ಹಿರಿಯ ಅಧಿಕಾರಿಗಳು ಕೂಡ ಜಾಗೃತಿ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರಿನ ಟೌನ್ ಹಾಲ್ ಸೇರಿದಂತೆ ಹಲವೆಡೆ ಚಿತ್ರೀಕರಣ ನಡೆದಿದೆ. ಪೊಲೀಸರ ಸೇವೆ ಕುರಿತು ಜಾಗೃತಿ ಡಾಕ್ಯುಮೆಂಟರಿ ಮಾಡಲಾಗುತ್ತಿದ್ದು, ಯೋಗರಾಜ್ ಭಟ್ ಆಕ್ಷನ್ ಕಟ್ ಹೇಳಿದ್ದಾರೆ.