alex Certify ‘ಯುವರತ್ನ’ ನಿರೀಕ್ಷೆಯಲ್ಲಿದ್ದ ಅಪ್ಪು ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಯುವರತ್ನ’ ನಿರೀಕ್ಷೆಯಲ್ಲಿದ್ದ ಅಪ್ಪು ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್

‘ಯುವರತ್ನ’ ನಿರೀಕ್ಷೆಯಲ್ಲಿದ್ದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿಗಳಿಗೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಿಹಿ ಸುದ್ದಿ ನೀಡಿದ್ದಾರೆ.

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ‘ಯುವರತ್ನ’ ಪೋಸ್ಟರ್ ಬಿಡುಗಡೆ ಮಾಡಲಾಗುವುದು. ಅಭಿಮಾನಿಗಳ ಕೋರಿಕೆಗಾಗಿ ‘ಯುವರತ್ನ’ ಪೋಸ್ಟರ್ ವರಮಹಾಲಕ್ಷ್ಮಿಗೆ ದೊಡ್ಮನೆ ಅಭಿಮಾನಿಗಳ ಬಳಗಕ್ಕೆ ಇದು ಸಮರ್ಪಣೆ ಎಂದು ಸಂತೋಷ್ ಆನಂದರಾಮ್ ಟ್ವೀಟ್ ಮಾಡಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಏಪ್ರಿಲ್ 3ರಂದು ‘ಯುವರತ್ನ’ ಬಿಡುಗಡೆಯಾಗಬೇಕಿತ್ತು. ಆದರೆ, ಕೊರೋನಾ ಕಾರಣದಿಂದ ಲಾಕ್ಡೌನ್ ಜಾರಿಯಾದ ಪರಿಣಾಮ ಚಿತ್ರ ಬಿಡುಗಡೆ ಆಗಿಲ್ಲ.

ಅಭಿಮಾನಿಗಳು ಸೇರಿದಂತೆ ಸಿನಿರಸಿಕರು ಚಿತ್ರದ ಕುರಿತಾಗಿ ತೀವ್ರ ಕುತೂಹಲ ಹೊಂದಿದ್ದಾರೆ. ಆರಂಭದಿಂದಲೂ ಭಾರೀ ನಿರೀಕ್ಷೆ ಮೂಡಿಸಿರುವ ‘ಯುವರತ್ನ’ ಬಿಡುಗಡೆ ದಿನಾಂಕವನ್ನು ಕಾತರದಿಂದ ಕಾಯತೊಡಗಿದ್ದಾರೆ. ಇದೇ ವೇಳೆ ‘ಯುವರತ್ನ’ ಪೋಸ್ಟರ್ ಬಿಡುಗಡೆಯಾಗಲಿದ್ದು ವರಮಹಾಲಕ್ಷ್ಮಿ ಹಬ್ಬಕ್ಕೆ ಅಪ್ಪು ಅಭಿಮಾನಿಗಳ ಸಂಭ್ರಮ ಹೆಚ್ಚಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...