ರಾಜ್ಯದಲ್ಲಿ ಮಹಾಮಾರಿ ‘ಡೆಂಗ್ಯೂ’ ಆತಂಕ : ಇದುವರೆಗೆ 7 ಮಂದಿ ಸಾವು

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ‘ಡೆಂಗ್ಯೂ’ ಆತಂಕ ಮನೆ ಮಾಡಿದ್ದು, ಇದುವರೆಗೆ 7 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 5749 ಪ್ರಕರಣಗಳು ದಾಖಲಾಗಿದ್ದು, ಆತಂಕ ಮನೆ ಮಾಡಿದೆ. ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದೆ. ಡೆಂಗ್ಯೂ ಜೊತೆ ಚಿಕನ್ ಗುನ್ಯಾ ಕೂಡ ಆತಂಕ ಸೃಷ್ಟಿಸಿದೆ.

ಮಹಾಮಾರಿ ‘ಡೆಂಗ್ಯೂ’ಗೆ ಚಿಕ್ಕಮಗಳೂರಿನಲ್ಲಿ ಇಂದು ಬಾಲಕಿ ಮೃತಪಟ್ಟಿದ್ದಾಳೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ 6 ವರ್ಷದ ಸಾನಿಯಾ ಮೃತ ಬಾಲಕಿ. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಬಾಲಕಿಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಸಾವನ್ನಪ್ಪಿದ್ದಾಳೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read