ಕರವೇ ನಾರಾಯಣಗೌಡರಿಗೆ ಮತ್ತೆ ಸಂಕಷ್ಟ : 8 ಪ್ರಕರಣದಲ್ಲಿ ನೋಟಿಸ್ ನೀಡಲು ಪೊಲೀಸರ ಸಿದ್ದತೆ

ಬೆಂಗಳೂರು : ಜೈಲಿಂದ ಬಿಡುಗಡೆಯಾದರೂ ಕರ್ನಾಟಕ ರಕ್ಷಣ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡರಿಗೆ ಸಂಕಷ್ಟ ತಪ್ಪಿಲ್ಲ, 8 ಪ್ರಕರಣದಲ್ಲಿ ನೋಟಿಸ್ ನೀಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.

ಹೌದು, ಅವರು ಬಂಧನಕ್ಕೊಳಗಾಗಿದ್ದು ಒಂದು ಕೇಸ್ ನಲ್ಲಿ ಆದರೂ ಅವರ ಮೇಲೆ 8 ಕೇಸ್ ಗಳು ಬಾಕಿಯಿದೆ. ವಿವಿಧ ಕಡೆ ಹೆದ್ದಾರಿ ತಡೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಪ್ರಕರಣ ಸೇರಿ ಚಿಕ್ಕಜಾಲದಲ್ಲಿ ಒಟ್ಟು 6 ಪ್ರಕರಣಗಳಿದೆ. ಯಲಹಂಕದಲ್ಲಿ ಬಿಎಂಟಿಸಿ ಬಸ್ಗೆ ಹಾನಿ ಮಾಡಿದ, ಇಕೋ ಪೊಲೀಸ್ ಬೋರ್ಡ್ ಡ್ಯಾಮೇಜ್ ಪ್ರಕರಣಗಳಿದ್ದು, , 8 ಪ್ರಕರಣದಲ್ಲಿ ನೋಟಿಸ್ ನೀಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.

2017 ರ ಪ್ರಕರಣದಲ್ಲಿ ಜಾಮೀನು ಸಿಗುತ್ತಿದ್ದಂತೆ ಹಲಸೂರು ಗೇಟ್ ಠಾಣೆ ಪ್ರಕರಣದಲ್ಲಿ ಮತ್ತೆ ನಾರಾಯಣ ಗೌಡರನ್ನು ವಶಕ್ಕೆ ಪಡೆದಿದ್ದರು. ನಂತರ ಈ ಪ್ರಕರಣದಲ್ಲೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಎನ್ ಡಿ ಎಂ ಎ ಕಾಯ್ದೆಯಡಿಯ ಪ್ರಕರಣದಲ್ಲಿ ಮತ್ತೆ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಬಂಧಿಸಲಾಗಿತ್ತು. ನಂತರ ಪೊಲೀಸರು ಬೆಂಗಳೂರಿನ 30ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.  ನಂತರ ಅವರಿಗೆ ಹಲಸೂರು ಗೇಟ್ ಠಾಣೆಯಲ್ಲಿ ದಾಖಲಾಗಿದ್ದಂತ ಎನ್ ಡಿಎಂಎ ಕಾಯ್ದೆಯಡಿ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಲಾಗಿತ್ತು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read