‘ಬಿಜೆಪಿ, ಜೆಡಿಎಸ್ ಗೆ ಮತ ಹಾಕಿದವರಿಗೂ ಅಕ್ಕಿ ಸಿಗುತ್ತೆ, ಅನ್ಯಾಯ ಮಾಡಬೇಡಿ’ : ಡಿಕೆ ಸುರೇಶ್ ಆಕ್ರೋಶ

ಬೆಂಗಳೂರು : ಬಿಜೆಪಿ, ಜೆಡಿಎಸ್ ಗೆ ಮತ ಹಾಕಿದವರಿಗೂ ಅಕ್ಕಿ ಸಿಗುತ್ತೆ, ಬಡವರಿಗೆ ಅನ್ಯಾಯ ಮಾಡಬೇಡಿ ಎಂದು ಸಂಸದ ಡಿಕೆ ಸುರೇಶ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಕೆ ಸುರೇಶ್ ನಾವು ಫ್ರೀ ಆಗಿ ಅಕ್ಕಿ ಕೊಡಿ ಎಂದು ನಾವು ಕೇಳುತ್ತಿಲ್ಲ, ಕೇಂದ್ರದ ದರ ಎಷ್ಟಿದೆ ಆ ಪ್ರಕಾರ ಕೊಡಿ. ಕೇಂದ್ರ ಸರ್ಕಾರದ ಬಳಿ ಸಾಕಷ್ಟು ಅಕ್ಕಿ ದಾಸ್ತಾನು ಇದೆ. ಬಡವರಿಗೆ ಅನ್ಯಾಯ ಮಾಡಬೇಡಿ ಎಂದರು.

ಕಾಂಗ್ರೆಸ್ ಗೆ ಓಟು ಹಾಕಿದವರಿಗೂ ಅಕ್ಕಿ ಸಿಗುತ್ತೆ. ಬಿಜೆಪಿ- ಜೆಡಿಎಸ್ ಗೆ ಮತ ಹಾಕಿದವರಿಗೂ ಅಕ್ಕಿ ಸಿಗುತ್ತೆ. ಬಡವರಿಗೆ ನೀಡುವ ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಡಿಕೆ ಸುರೇಶ್ ಆಕ್ರೋಶ ಹೊರ ಹಾಕಿದರು .

TAGGED:
Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read