ಮುಂದಿನ 10 ವರ್ಷಗಳಲ್ಲಿ ಬೆಂಗಳೂರಿಗೆ ನನ್ನ ಕೊಡುಗೆ ಏನು ಎಂದು ಎಲ್ಲರಿಗೂ ಅರ್ಥವಾಗುತ್ತದೆ : DCM ಡಿ.ಕೆ ಶಿವಕುಮಾರ್

ಬೆಂಗಳೂರು : ಮುಂದಿನ 10 ವರ್ಷಗಳಲ್ಲಿ ಬೆಂಗಳೂರಿಗೆ ನನ್ನ ಕೊಡುಗೆ ಏನು ಎಂದು ಎಲ್ಲರಿಗೂ ಅರ್ಥವಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮುಂದಿನ 10 ವರ್ಷಗಳಲ್ಲಿ ಬೆಂಗಳೂರಿಗೆ ನನ್ನ ಕೊಡುಗೆ ಏನು ಎಂದು ಎಲ್ಲರಿಗೂ ಅರ್ಥವಾಗುತ್ತದೆ! ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಗ್ರೇಟರ್ ಬೆಂಗಳೂರಿನ ಬಗೆಗಿನ‌ ತಮ್ಮ ಪರಿಕಲ್ಪನೆ, ದೃಷ್ಟಿಕೋನವನ್ನು ಹಂಚಿಕೊಂಡ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು, ”ನನ್ನ ಅಧಿಕಾರಾವಧಿಯಲ್ಲಿ ಬೆಂಗಳೂರಿಗೆ ಏನಾದರೂ ಕೊಡುಗೆ ನೀಡಬೇಕು ಎಂದು ಪಣತೊಟ್ಟಿದ್ದೇನೆ” ಎಂಬ ಅವರ ಮಹತ್ವಾಕಾಂಕ್ಷೆಯನ್ನು ತೆರೆದಿಟ್ಟರು.

ಜಿಬಿಎ ಕುರಿತು ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ರಾಜಕಾರಣಿಗಳು ಟೀಕೆಗಳಿಗೆ ಹೆದರಬಾರದು. ಜನರ ಧ್ವನಿಯನ್ನು ಆಲಿಸಬೇಕು. ಇಡೀ ದೇಶದಲ್ಲೇ ಮೊದಲು ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಕರೆಮಾಡಿ ರಸ್ತೆ ಗುಂಡಿ, ಕಸದ ಬಗ್ಗೆ ಮಾಹಿತಿ ನೀಡುವ ಅವಕಾಶ ಕಲ್ಪಿಸಿಕೊಡಲಾಗಿದೆ, ಎಂಬ ಮಾಹಿತಿ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read