ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.

ತುಡುಕೂರು ಮಂಜುಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ. ಬಜರಂಗದಳ ಜಿಲ್ಲಾ ಘಟಕದ ಮಾಜಿ ಸಂಚಾಲಕ ಮಂಜು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಗಲಭೆ ಸೃಷ್ಟಿಸುವ ಕಾರಣ ನೀಡಿ ಗರಿಪಾರು ನೋಟಿಸ್ ಜಾರಿ ಮಾಡಲಾಗಿದೆ.

17 ಕಾರಣಗಳನ್ನು ನೀಡಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮಾರ್ಚ್ 14 ರಂದು ಜಿಲ್ಲಾಧಿಕಾರಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಸಂಘಟನೆ ಹೋರಾಟದಲ್ಲಿ ಮಂಜು ವಿರುದ್ಧ 24 ಕೇಸ್ ಗಳು ದಾಖಲಾಗಿದ್ದು, . ಇವುಗಳ ಪೈಕಿ 22 ಪ್ರಕರಣಗಳು ಖುಲಾಸೆಯಾಗಿವೆ. ಜಿಲ್ಲಾಡಳಿತ ನೀಡಿರುವ ಗಡಿಪಾರು ನೋಟಿಸ್ ಭಾರಿ ಚರ್ಚೆಗೆ ಕಾರಣವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read