ಬೆಂಗಳೂರು : ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಪೋಟಕ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಶಿವರಾಜ್ ಕುಮಾರ್ ಹಾಗೂ ನವೀನ್ ಬಂಧಿತರು ಎಂದು ಗುರುತಿಸಲಾಗಿದೆ.
ಕಲ್ಲು ಕ್ವಾರಿಯಲ್ಲಿ ಬಳಸುವ ಜಿಲಿಟಿನ್ ಕಡ್ಡಿಗಳನ್ನು ಆರೋಪಿಗಳು ಸಾಗಿಸುತ್ತಿದ್ದರು. ಕಲ್ಲು ಕ್ವಾರೆಯಲ್ಲಿ ಬಂಡೆ ಸಿಡಿಸಲು ಜಿಲಿಟಿನ್ ಕಡ್ಡಿಗಳನ್ನು ಖರೀದಿಸಲಾಗಿತ್ತು. ಅವುಗಳನ್ನು ರಿಪೇರಿಗೆ ಕೊಳ್ಳೇಗಾಲ ತಾಲೂಕಿಗೆ ತೆಗೆದುಕೊಂಡು ಹೋಗುವಾದ ಪೊಲೀಸರನ್ನು ನೋಡಿ ಹೆದರಿ ಬಸ್ ನಿಲ್ದಾಣದಲ್ಲೇ ಸ್ಪೋಟಕ ಇಟ್ಟು ಎಸ್ಕೇಪ್ ಆಗಿದ್ದರು.
ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಪೊಲೀಸರು ಆರು ತಂಡ ರಚನೆ ಮಾಡಿದ್ದರು.. ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಜುಲೈ 23ರಂದು ಬ್ಯಾಗ್ ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದವು. ಜಿಲೆಟಿನ್ ಕಡ್ಡಿಗಳು, ಡಿಟೋನೇಟರ್ ಗಳು ಪತ್ತೆಯಾಗಿದ್ದು ಕಲಾಸಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಪೊಲೀಸರು ಆರು ತಂಡ ರಚನೆ ಮಾಡಿದ್ದರು.. ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು. ಈ ಬೆನ್ನಲ್ಲೇ ಇಬ್ಬರನ್ನು ಬಂಧಿಸಲಾಗಿದೆ.