ಪತ್ರಕರ್ತರ ಹೆಸರಲ್ಲಿ ಸುಲಿಗೆ: ಇಬ್ಬರು ಅರೆಸ್ಟ್

ಶಿವಮೊಗ್ಗ: ಪತ್ರಕರ್ತರು ಎಂದು ಹೇಳಿಕೊಂಡು ಸುಲಿಗೆ ಮಾಡಿದ್ದ ಇಬ್ಬರನ್ನು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ನವೀನ್ ಮತ್ತು ಸತೀಶ್ ಬಂಧಿತ ಆರೋಪಿಗಳು. ಹೊಳೆಹೊನ್ನೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಅಡಿಕೆ ಸಾಗಿಸುತ್ತಿದ್ದ ಲಾರಿಯನ್ನು ಅಡ್ಡಗಟ್ಟಿದ್ದಾರೆ. ತಾವು ಪತ್ರಕರ್ತರು ಎಂದು ಹೇಳಿಕೊಂಡು ಲಾರಿ ದಾಖಲೆ ಮತ್ತು ಲಾರಿಯಲ್ಲಿದ್ದ ಅಡಿಕೆಗೆ ಸಂಬಂಧಿಸಿದ ದಾಖಲೆ ಕೊಡುವಂತೆ ಬಲವಂತ ಮಾಡಿದ್ದಾರೆ. 30 ಲಕ್ಷ ರೂಪಾಯಿ ಕೊಡಲು ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದಾರೆ.

ಈ ವೇಳೆ ಲಾರಿ ಚಾಲಕ ಶಫಿವುಲ್ಲಾ ಮಾಲೀಕರಿಗೆ ಮಾಹಿತಿ ನೀಡಿದ್ದು, ವಿಷಯ ತಿಳಿದ ಲಾರಿ ಮಾಲೀಕರು ಸ್ಥಳಕ್ಕೆ ಬರುತ್ತಿದ್ದಂತೆ ಆರೋಪಿಗಳು ಲಾರಿ ಚಾಲಕನ ಬಳಿ ಇದ್ದ 10 ಸಾವಿರ ರೂಪಾಯಿ ಪಡೆದು ಪರಾರಿಯಾಗಿದ್ದಾರೆ.

ಲಾರಿ ಚಾಲಕ ಶಫಿವುಲ್ಲಾ ಹೊಳೆಹೊನ್ನೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಸುಲಿಗೆಗೆ ಯತ್ನಿಸಿದ ನವೀನ್ ಮತ್ತು ಸತೀಶ್ ಅವರನ್ನು ಬಂಧಿಸಲಾಗಿದೆ ಎಂದು ಸಿಪಿಐ ಆರ್.ಎಲ್. ಲಕ್ಷ್ಮಿಪತಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read