ಅಭಿಮಾನಿಗಳು ಸಿಡಿಸಿದ ಪಟಾಕಿ ಕಿಡಿ ತಗುಲಿ ಸಚಿವ ಕೆ.ಎನ್. ರಾಜಣ್ಣ ಕಣ್ಣಿಗೆ ಗಾಯ

ತುಮಕೂರು: ಅಭಿಮಾನಿಗಳು ಸಿಡಿಸಿದ ಪಟಾಕಿ ಕಿಡಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಕಣ್ಣಿಗೆ ತಗುಲಿ ಗಾಯವಾಗಿದೆ.

ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಹುಚ್ಚ ಮಾಸ್ತಿಗೌಡ ವೃತ್ತದಲ್ಲಿ ಘಟನೆ ನಡೆದಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರಾಜಣ್ಣ ಶಕ್ತಿ ಯೋಜನೆಗೆ ಚಾಲನೆ ನೀಡಲು ಹಾಸನಕ್ಕೆ ತೆರಳುತ್ತಿದ್ದರು. ಕುಣಿಗಲ್ ಮಾರ್ಗವಾಗಿ ರಾಜಣ್ಣ ತೆರಳುತ್ತಿರುವ ಮಾಹಿತಿ ತಿಳಿದ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು, ಹಿತೈಷಿಗಳು ಅವರನ್ನು ಕುಣಿಗಲ್ ಹುಚ್ಚ ಮಾಸ್ತಿಗೌಡ ವೃತ್ತದಲ್ಲಿ ಸ್ವಾಗತಿಸಿ ಹಾರ ಹಾಕಿ ಅಭಿನಂದಿಸಿದ್ದಾರೆ. ಈ ವೇಳೆ ಸಮೀಪದಲ್ಲಿಯೇ ಪಟಾಕಿ ಸಿಡಿಸಿದ್ದಾರೆ. ಸಚಿವ ರಾಜಣ್ಣ ಕನ್ನಡಕ ತೆಗೆಯುವ ವೇಳೆಯಲ್ಲಿ ಪಟಾಕಿ ಕಿಡಿ ಸಿಡಿದಿದ್ದು ಕಣ್ಣಿಗೆ ತಗುಲಿದೆ. ಕೂಡಲೇ ಅವರು ಖಾಸಗಿ ಆಸ್ಪತ್ರೆಗೆ ತೆರಳಿ ನೇತ್ರ ತಜ್ಞರಿಂದ ಚಿಕಿತ್ಸೆ ಪಡೆದು ಹಾಸನಕ್ಕೆ ಪ್ರಯಾಣ ಮುಂದುವರೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read