BREAKING : ದಾವಣಗೆರೆಯಲ್ಲಿ ಬೃಹತ್ ‘ಖೋಟಾ ನೋಟು’ ಜಾಲ ಪತ್ತೆ, ನಾಲ್ವರು ಆರೋಪಿಗಳು ಅರೆಸ್ಟ್.!

ದಾವಣಗೆರೆ : ದಾವಣಗೆರೆಯಲ್ಲಿ ಖೋಟಾ ನೋಟು ಜಾಲ ಪತ್ತೆಯಾಗಿದ್ದು, ನಾಲ್ವರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕುಬೇರಪ್ಪ,  ಸಂತೋಷ್ ಕುಮಾರ್, ವೀರೇಶ್, ಹನುಮಂತಪ್ಪ ಎಂದು ಗುರುತಿಸಲಾಗಿದೆ. ಬಂಧಿತರಿಂದ 1 ಬೈಕ್ ಹಾಗೂ ಖೋಟಾ ನೋಟು ವಶಕ್ಕೆ ಪಡೆಯಲಾಗಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿರಡೋಣಿ ಸಪ್ತಗಿರಿ ಬಾರ್ & ರೆಸ್ಟೋರೆಂಟ್ ನಲ್ಲಿ ಖೋಟಾ ನೋಟು ಚಲಾವಣೆಯಾಗುತ್ತಿತ್ತು. ಬಾರ್ & ರೆಸ್ಟೋರೆಂಟ್ ಸೇರಿದಂತೆ ಹಲವು ಕಡೆ ಖೋಟಾ ನೋಟು ವಿತರಿಸಲಾಗುತ್ತಿತ್ತು. ಜೈಲಿನಿಂದ ರಿಲೀಸ್ ಆಗಿದ್ದ ಆರೋಪಿ ಕುಬೇರಪ್ಪ ಎಂಬಾತ ಈ ದಂಧೆ ನಡೆಸುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಹರಿಹರ, ಹೊಸಪೇಟೆ ಸೇರಿದಂತೆ ಹಲವು ಕಡೆಗೆ ಇಲ್ಲಿಂದ ಖೋಟಾ ನೋಟು ಸಪ್ಲೈ ಆಗುತ್ತಿತ್ತು ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read