BIG NEWS: ಎರಡು ಕುಟುಂಬಗಳ ನಡುವೆ ಕಲಹ: ದೊಣ್ಣೆ, ಕುಡುಗೋಲು ಹಿಡಿದು ಮಾರಾಮಾರಿ: ಓರ್ವನ ಕೊಲೆಯಲ್ಲಿ ಅಂತ್ಯ

ರಾಯಚೂರು: ಎರಡು ಕುಟುಬಗಳ ನಡುವಿನ ಕಲಹ ತಾರಕಕ್ಕೇರಿ ಗುಂಫು ಗರ್ಷಣೆಗೆ ತಿರುಗಿದ್ದು, ಓರ್ವ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರು ತಾಲೂಕಿನ ಮಿರ್ಜಾಪುರ ಗ್ರಾಮದಲ್ಲಿ ನಡೆದಿದೆ.

ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕುಟುಂಬಗಳ ನಡುವಿನ ಘರ್ಷಣೆ ವ್ಯಕ್ತಿಯೊಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಗಲಾಟೆಯಲ್ಲಿ ಮಾರಕಾಸ್ತ್ರಗಳಿಂದ ಹೊಡೆದು ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ.

ಭೀಮೇಶ್ ನಾಯಕ್ (38) ಮೃತ ದುರ್ದೈವಿ. ಗಲಾಟೆಯಲ್ಲಿ ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಕಟ್ಟಿಗೆ, ಕುಡುಗೋಲು, ಭರ್ಜಿಯಿಂದ ಎರಡು ಕುಟುಂಬದ ಜನರು ಹೊಡೆದಾಡಿಕೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಅಲಾರಿನಾಯಕ, ದೂಳಯ್ಯ, ರಾಮಲಮ್ಮ ಎಂಬುವವರು ಗಾಯಾಳುಗಳಾಗಿದ್ದು, ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಸದ್ಯ ಮಾರಾಮಾರಿ,ಕೊಲೆ ಪ್ರಕರಣ ಸಂಬಂಧ ಇಡಪನೂರು ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. 22 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read